Homeಕರ್ನಾಟಕಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

- Advertisement -
- Advertisement -

ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬವೊಂದು ಉಡುಪಿಯ ದೇವಸ್ಥಾನವೊಂದರ ಸಮೀಪ ಅಡುಗೆ ಮಾಡುತ್ತಿದ್ದಾಗ ಶ್ರೀರಾಮ ಸೇನೆಗೆ ಸೇರಿದ ಕಾರ್ಯಕರ್ತರ ಗುಂಪೊಂದು ಕಿರುಕುಳ ನೀಡಿದ್ದು, ಜಾಗ ಖಾಲಿ ಮಾಡುವಂತೆ ಸೂಚಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಬಲಪಂಥೀಯ ಹಿಂದೂ ಗುಂಪಿಗೆ ಸೇರಿದ ಕಾರ್ಯಕರ್ತರು, “ಕುಟುಂಬವು ಮೀನು ಬೇಯಿಸುವ ಮೂಲಕ ದೇವಾಲಯದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಮುಸ್ಲಿಂ ಕುಟುಂಬವು ಮಂಗಳೂರಿನಿಂದ ಇಲ್ಲಿನ ಸೀತಾನದಿಯ ದಂಡೆಗೆ ಒಂದು ದಿನದ ಪಿಕ್ನಿಕ್‌ಗಾಗಿ ಬಂದಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳಿಗೆ ಲಭ್ಯವಾಗಿರುವ ವಿಡಿಯೊದಲ್ಲಿ ವ್ಯಕ್ತಿಯೊಬ್ಬರು, “ನಿಮಗೇನಾಗಿದೆ? ಮಸೀದಿಯ ಮುಂದೆ ಯಾರಾದರೂ ಹಂದಿಯನ್ನು ಕಡಿದರೆ ನೀವು ಸುಮ್ಮನಿರುತ್ತೀರಾ? ನೀವು ತಿನ್ನಲು ಬಯಸಿದ್ದನ್ನು ನೀವು ತಿನ್ನಿರಿ. ನಮಗೆ ಯಾವುದೇ ತೊಂದರೆ ಇಲ್ಲ. ಆದರೆ, ಇಲ್ಲಿ ಅಡುಗೆ ಮಾಡಬೇಡಿ” ಎಂದು ಆಕ್ಷೇಪ ವ್ಯಕ್ತಪಡಿಸುತ್ತಿರುವುದು ದಾಖಲಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರ ವಾಗ್ದಾಳಿಯ ನಂತರ ಮುಸ್ಲಿಂ ಕುಟುಂಬವು ಕ್ಷಮೆಯಾಚಿಸಿದೆ. ಮಗುವೊಂದು ಆತಂಕದಲ್ಲಿ ನೋಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

“ನಮಗೆ ತಿಳಿದಿರಲಿಲ್ಲ, ದೇವಸ್ಥಾನವು ದೂರದಲ್ಲಿದೆ ಎಂದು ನಾನು ಭಾವಿಸಿದೆವು” ಎಂದು ಕುಟುಂಬಕ್ಕೆ ಸೇರಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಅದಕ್ಕೆ ಶ್ರೀರಾಮಸೇನೆ ಸದಸ್ಯರು ಪ್ರತಿಕ್ರಿಯಿಸಿ, “ನಿಮಗೆ ಗೊತ್ತಿಲ್ಲದಿದ್ದರೆ ಹೇಗೆ? ಅಲ್ಲೊಂದು ದೇಗುಲವಿದೆ. ಇದು ಸಾಮಾನ್ಯ ಜ್ಞಾನ” ಎಂದಿದ್ದಾರೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ಹಿಂದೂ- ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷವನ್ನು ಹುಟ್ಟುಹಾಕುತ್ತಿರುವ ಸಂಘಟನೆಗಳು ದಿನದಿಂದ ದಿನಕ್ಕೆ ಬಲವಾಗುತ್ತಿವೆ. ದೇವಾಲಯಗಳ ಬಳಿ ವ್ಯಾಪಾರಿಗಳಿಗೆ ನಿಷೇಧ, ಜಟ್ಕಾ ಕಟ್ ವಿವಾದ, ಆಜಾನ್‌ ವಿವಾದ – ಹೀಗೆ ಒಂದಲ್ಲ ಒಂದು ಕೋಮು ಕೇಂದ್ರಿತ ಸಂಗತಿಗಳನ್ನು ಎಳೆದುತಂದು ರಾಜ್ಯದಲ್ಲಿ ವಿವಾದ ಸೃಷ್ಟಿಸಲಾಗುತ್ತಿದೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್‌- ಕೇಸರಿ ಶಾಲು ವಿವಾದ ಸೃಷ್ಟಿಸಿದ ಬಳಿಕ ಹಿಂದೂ- ಮುಸ್ಲಿಂ ಸಮುದಾಯದ ನಡುವೆ ವಿಷಮ್ಯವನ್ನು ಹರಡುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ ಉಡುಪಿಯಲ್ಲಿ ಮೇ  14ರಂದು ಸಾಮರಸ್ಯ ನಡಿಗೆ ಕಾರ್ಯಕ್ರಮವನ್ನು ಪ್ರಗತಿಪರ ಮನಸ್ಸುಗಳು ಆಯೋಜಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....