Homeಕರ್ನಾಟಕಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

- Advertisement -
- Advertisement -

ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬವೊಂದು ಉಡುಪಿಯ ದೇವಸ್ಥಾನವೊಂದರ ಸಮೀಪ ಅಡುಗೆ ಮಾಡುತ್ತಿದ್ದಾಗ ಶ್ರೀರಾಮ ಸೇನೆಗೆ ಸೇರಿದ ಕಾರ್ಯಕರ್ತರ ಗುಂಪೊಂದು ಕಿರುಕುಳ ನೀಡಿದ್ದು, ಜಾಗ ಖಾಲಿ ಮಾಡುವಂತೆ ಸೂಚಿಸಿರುವುದಾಗಿ ‘ದಿ ಕ್ವಿಂಟ್’ ವರದಿ ಮಾಡಿದೆ.

ಬಲಪಂಥೀಯ ಹಿಂದೂ ಗುಂಪಿಗೆ ಸೇರಿದ ಕಾರ್ಯಕರ್ತರು, “ಕುಟುಂಬವು ಮೀನು ಬೇಯಿಸುವ ಮೂಲಕ ದೇವಾಲಯದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಮುಸ್ಲಿಂ ಕುಟುಂಬವು ಮಂಗಳೂರಿನಿಂದ ಇಲ್ಲಿನ ಸೀತಾನದಿಯ ದಂಡೆಗೆ ಒಂದು ದಿನದ ಪಿಕ್ನಿಕ್‌ಗಾಗಿ ಬಂದಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳಿಗೆ ಲಭ್ಯವಾಗಿರುವ ವಿಡಿಯೊದಲ್ಲಿ ವ್ಯಕ್ತಿಯೊಬ್ಬರು, “ನಿಮಗೇನಾಗಿದೆ? ಮಸೀದಿಯ ಮುಂದೆ ಯಾರಾದರೂ ಹಂದಿಯನ್ನು ಕಡಿದರೆ ನೀವು ಸುಮ್ಮನಿರುತ್ತೀರಾ? ನೀವು ತಿನ್ನಲು ಬಯಸಿದ್ದನ್ನು ನೀವು ತಿನ್ನಿರಿ. ನಮಗೆ ಯಾವುದೇ ತೊಂದರೆ ಇಲ್ಲ. ಆದರೆ, ಇಲ್ಲಿ ಅಡುಗೆ ಮಾಡಬೇಡಿ” ಎಂದು ಆಕ್ಷೇಪ ವ್ಯಕ್ತಪಡಿಸುತ್ತಿರುವುದು ದಾಖಲಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರ ವಾಗ್ದಾಳಿಯ ನಂತರ ಮುಸ್ಲಿಂ ಕುಟುಂಬವು ಕ್ಷಮೆಯಾಚಿಸಿದೆ. ಮಗುವೊಂದು ಆತಂಕದಲ್ಲಿ ನೋಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

“ನಮಗೆ ತಿಳಿದಿರಲಿಲ್ಲ, ದೇವಸ್ಥಾನವು ದೂರದಲ್ಲಿದೆ ಎಂದು ನಾನು ಭಾವಿಸಿದೆವು” ಎಂದು ಕುಟುಂಬಕ್ಕೆ ಸೇರಿದ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಅದಕ್ಕೆ ಶ್ರೀರಾಮಸೇನೆ ಸದಸ್ಯರು ಪ್ರತಿಕ್ರಿಯಿಸಿ, “ನಿಮಗೆ ಗೊತ್ತಿಲ್ಲದಿದ್ದರೆ ಹೇಗೆ? ಅಲ್ಲೊಂದು ದೇಗುಲವಿದೆ. ಇದು ಸಾಮಾನ್ಯ ಜ್ಞಾನ” ಎಂದಿದ್ದಾರೆ.

ಇದನ್ನೂ ಓದಿರಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ಹಿಂದೂ- ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷವನ್ನು ಹುಟ್ಟುಹಾಕುತ್ತಿರುವ ಸಂಘಟನೆಗಳು ದಿನದಿಂದ ದಿನಕ್ಕೆ ಬಲವಾಗುತ್ತಿವೆ. ದೇವಾಲಯಗಳ ಬಳಿ ವ್ಯಾಪಾರಿಗಳಿಗೆ ನಿಷೇಧ, ಜಟ್ಕಾ ಕಟ್ ವಿವಾದ, ಆಜಾನ್‌ ವಿವಾದ – ಹೀಗೆ ಒಂದಲ್ಲ ಒಂದು ಕೋಮು ಕೇಂದ್ರಿತ ಸಂಗತಿಗಳನ್ನು ಎಳೆದುತಂದು ರಾಜ್ಯದಲ್ಲಿ ವಿವಾದ ಸೃಷ್ಟಿಸಲಾಗುತ್ತಿದೆ.

ಉಡುಪಿಯ ಕಾಲೇಜೊಂದರಲ್ಲಿ ಹಿಜಾಬ್‌- ಕೇಸರಿ ಶಾಲು ವಿವಾದ ಸೃಷ್ಟಿಸಿದ ಬಳಿಕ ಹಿಂದೂ- ಮುಸ್ಲಿಂ ಸಮುದಾಯದ ನಡುವೆ ವಿಷಮ್ಯವನ್ನು ಹರಡುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ ಉಡುಪಿಯಲ್ಲಿ ಮೇ  14ರಂದು ಸಾಮರಸ್ಯ ನಡಿಗೆ ಕಾರ್ಯಕ್ರಮವನ್ನು ಪ್ರಗತಿಪರ ಮನಸ್ಸುಗಳು ಆಯೋಜಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...