Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...