Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...