Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...