ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.
ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.
ನಾವು ಎಳೆಯರು, ನಾವು ಗೆಳೆಯರು.. ನಾವು ಹೀಗೆಯೇ ಇರುತ್ತೇವೆ…
ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ ವಿದ್ಯಾರ್ಥಿನಿಯರು.. "ಇದು ನನ್ನ ಭಾರತ" ಹೆಸರಿನಲ್ಲಿ ಫೋಟೊ, ವಿಡಿಯೋ ವೈರಲ್.. pic.twitter.com/fD3YqlDNEA
— Naanu Gauri (@naanugauri) February 17, 2022
ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.
United we stand.
My India. pic.twitter.com/xUih16LVo7
— Rahul Gandhi (@RahulGandhi) February 17, 2022
“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್ಬುಕ್ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.
ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಹಿಜಾಬ್ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ; Hijab Live | ಹಿಜಾಬ್ ಲೈವ್ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ
ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)
ನಾವು ಎಳೆಯರು ನಾವು ಗೆಳೆಯರು
ಹೃದಯ ಹೂವಿನ ಹಂದರ
ನಾಳೆ ನಾವೇ ನಾಡ ಹಿರಿಯರು
ನಮ್ಮ ಕನಸದೊ ಸುಂದರ.
ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
ಭಾರತ ಮಂದಿರ
ಶಾಂತಿ ದಾತನು ಗಾಂಧಿ ತಾತನು
ಎದೆಯ ಬಾನಿನ ಚಂದಿರ
ಜಾತಿ ರೋಗದ ಭೀತಿ ತೊಡೆಯುತ
ನೀತಿ ಮಾರ್ಗದಿ ನಡೆವೆವು
ಒಂದೆ ಮಾನವ ಕುಲವು ಎನ್ನುತ
ವಿಶ್ವ ಧರ್ಮವ ಪಡೆವೆವು
ನಾವು ಎಳೆಯರು ನಾವು ಗೆಳೆಯರು
ಹೃದಯ ಹೂವಿನ ಹಂದರ
ನಾಳೆ ನಾವೇ ನಾಡ ಹಿರಿಯರು
ನಮ್ಮ ಕನಸದೊ ಸುಂದರ.
(ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)
ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)
ನಾವು ಎಳೆಯರು ನಾವು ಗೆಳೆಯರು
ಹೃದಯ ಹೂವಿನ ಹಂದರ
ನಾಳೆ ನಾವೇ ನಾಡ ಹಿರಿಯರು
ನಮ್ಮ ಕನಸದೊ ಸುಂದರ.
ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
ಭಾರತ ಮಂದಿರ
ಶಾಂತಿ ದಾತನು ಗಾಂಧಿ ತಾತನು
ಎದೆಯ ಬಾನಿನ ಚಂದಿರ
ಜಾತಿ ರೋಗದ ಭೀತಿ ತೊಡೆಯುತ
ನೀತಿ ಮಾರ್ಗದಿ ನಡೆವೆವು
ಒಂದೆ ಮಾನವ ಕುಲವು ಎನ್ನುತ
ವಿಶ್ವ ಧರ್ಮವ ಪಡೆವೆವು
ನಾವು ಎಳೆಯರು ನಾವು ಗೆಳೆಯರು
ಹೃದಯ ಹೂವಿನ ಹಂದರ
ನಾಳೆ ನಾವೇ ನಾಡ ಹಿರಿಯರು
ನಮ್ಮ ಕನಸದೊ ಸುಂದರ.
(ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)
Nanu Gauri is a leftist always writing against Hindus only, Hindu girls you are great with your work but tomorrow others are not so open like you.
‘ ನಾವು ಎಳೆಯರು ನಾವು ಗೆಳೆಯರು ‘
ಕವನ ರಚಿಸಿದ ಕವಿ
ಶಂ . ಗು . ಬಿರಾದಾರ
ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
ನೆನಪಿಸಿದ ನಿಮಗೆ ಧನ್ಯವಾದಗಳು
ಪೂರ್ಣ ಕವನ ಕಳಿಸುವೆ
ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.
ಈ ಕವನ ರಚಿಸಿದವರು ಶಂ ಗು ಬಿರಾದಾರ
ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ
ಸಿರಿಮನೆ ನಾಗರಾಜ್ ಸರ್
ನನ್ನ ಹತ್ತಿರ ಆಡಿಯೋ ಇದೆ
ದಯಮಾಡಿ ನನ್ನನ್ನು ಸಂಪರ್ಕಿಸಿ
ಸಿರಿಮನೆ ನಾಗರಾಜ್ ಸರ್
ನನ್ನ ಹತ್ತಿರ ಆಡಿಯೋ ಇದೆ
ದಯಮಾಡಿ ನನ್ನನ್ನು ಸಂಪರ್ಕಿಸಿ
9448776817 ಈ ನಂಬರನ್ನು ಸಂಪರ್ಕಿಸಿ
Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.
ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ಸಂಪರ್ಕಿಸಬಹುದೆ!