Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...