Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...