Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...