Homeಮುಖಪುಟಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ...

ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ ಉಡುಪಿ ವಿದ್ಯಾರ್ಥಿನಿಯರು: ಫೋಟೊ, ವಿಡಿಯೋ ವೈರಲ್

ಈ ಫೋಟೊವನ್ನು ಸಾವಿರಾರು ಜನರು 'ಇದು ನನ್ನ ಭಾರತ' ಎಂಬ ಹೆಸರಿನೊಂದಿಗೆ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಯಾವ ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಕಾರಣಕ್ಕೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಯಿಯೊ ಅದೇ ಉಡುಪಿಯಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು ಒಟ್ಟಿಗೆ ಕೈ ಕೈ ಹಿಡಿದು ಕಾಲೇಜಿಗೆ ಬಂದು ಸೌಹಾರ್ದತೆ ಸಾರಿದ್ದಾರೆ. ಈ ಹೃದಯಸ್ಪರ್ಶಿ ಸಂದರ್ಭದ ಫೋಟೊ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿವೆ.

ಹಿಜಾಬ್ ಧರಿಸುವುದು ನಮ್ಮ ಮೂಲಭೂತ ಹಕ್ಕು ಎಂಬ ವಿಷಯ ಹೈಕೋರ್ಟ್ ಪ್ರವೇಶಿಸಿತು. ತದನಂತರ ಮಧ್ಯಂತರ ಆದೇಶವನ್ನು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡ ಕಾರಣ ಹಲವೆಡೆ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ-ಕಾಲೇಜಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ರಾಜ್ಯ ಸರ್ಕಾರ 5 ದಿನಗಳ ರಜೆ ಘೋಷಿಸಿತ್ತು. ಅದಾದ ನಂತರ ಬುಧವಾರದಿಂದ ಶಾಲಾ-ಕಾಲೇಜುಗಳ ಮತ್ತೆ ಆರಂಭವಾಗಿವೆ. ಅಂದು ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿಗೆ ಹಲವಾರು ವಿದ್ಯಾರ್ಥಿನಿಯರು ಕೈ ಕೈ ಹಿಡಿದು ಬಂದು ಸೌಹಾರ್ದ ಸಂದೇಶ ಸಾರಿದ್ದಾರೆ.

ಡೆಕ್ಕನ್ ಹೆರಾಲ್ಡ್‌ ಪತ್ರಿಕೆಯಲ್ಲಿ ಈ ಫೋಟೊ “ವಿಭಿನ್ನತೆಯಲ್ಲಿ ಏಕತೆ” ಹೆಸರಿನಲ್ಲಿ ಪ್ರಕಟಗೊಂಡಿತ್ತು. ಆ ಚಿತ್ರವನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ನಾವು ಒಟ್ಟಾಗಿ ನಿಂತಿದ್ದೇವೆ. ನನ್ನ ಭಾರತ” ಎಂದು ಬರೆದುಕೊಂಡಿದ್ದಾರೆ.

“ಕೋಮುವಾದಿಗಳ ಆಟ ಬಹಳ ದಿನ ನಡೆಯದು. ನಮಗೆ ನಾಳೆಯ ಬಗ್ಗೆ ಭರವಸೆ ನೀಡುವುದು ಇಂತಹ ದೃಶ್ಯಗಳೇ” ಎಂದು ಹಿರಿಯ ಚಿಂತಕರಾದ ಶ್ರೀನಿವಾಸ ಕಾರ್ಕಳರವರು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮಗುವನ್ನು ತೋಳದಂತೆ ಹಿಂಬಾಲಿಸಿದ ಪತ್ರಕರ್ತನೆಲ್ಲಿ? ಕೆಳಗಿರುವ ಕವಿತೆಯಂಥಾ ಫೋಟೋ ತೆಗೆದ ಇರ್ಶಾದ್‌ ಎಲ್ಲಿ? ಎಂದು ಕನ್ನಡದ ಹಿರಿಯ ಚಿಂತಕರಾದ ಪುರುಷೋತ್ತಮ ಬಿಳಿಮಲೆಯವರು ಈ ಫೋಟೊವನ್ನು ಹಂಚಿಕೊಂಡಿದ್ದಾರೆ.

ಈ ನೆಲದ ಸಹಬಾಳ್ವೆಯ ತತ್ವ, ಪ್ರಭುತ್ವವನ್ನೂ ತಲೆಬಾಗಿಸಿದೆ…. ಎಂದು ದಯಾನಂದಗೌಡರವರು ಹಂಚಿಕೊಂಡಿದ್ದಾರೆ.

ಕಳೆದ ಕೆಲ ದಿನಗಳಿಂದ ಹಿಜಾಬ್‌ಗೆ ವಿರೋಧವಾಗಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದು, ಕಾಲೇಜಿಗೆ ಕಲ್ಲು ತೂರಿದ್ದು, ಧ್ವಜಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದು, ಮಂಡ್ಯದ ಮುಸ್ಕಾನ್ ಖಾನ್ ಎಂಬ ಹೆಣ್ಣು ಮಗಳ ಸುತ್ತುವರಿದು ಜೈಶ್ರೀರಾಮ್ ಕೂಗಿದ್ದು, ಮಾಧ್ಯಮಗಳು ವಿದ್ಯಾರ್ಥಿನಿಯರನ್ನು ಅಟ್ಟಾಡಿಸಿದ್ದು ಸಾಮಾಜಿಕ ವಾತವಾರಣವನ್ನು ಕಲುಷಿತಗೊಳಿಸಿದ್ದವು. ಈಗ ಉಡುಪಿಯ ವಿದ್ಯಾರ್ಥಿನಿಯರು ಒಟ್ಟಿಗೆ ಹೆಜ್ಜೆ ಹಾಕುವ ಮೂಲಕ ಬಾಂಧವ್ಯ ಮೆರೆದಿದ್ದಾರೆ. ಹಾಗಾಗಿ ಈ ಫೋಟೊವನ್ನು ಸಾವಿರಾರು ಜನ ತಮ್ಮ ಪ್ರೊಫೈಲ್, ಕವರ್ ಫೋಟೊವನ್ನಾಗಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ; Hijab Live | ಹಿಜಾಬ್ ಲೈವ್‌ | ವಿಚಾರಣೆ ಪ್ರಾರಂಭಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

10 COMMENTS

  1. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ. ಬಹುಶ ಕವನ ಇಷ್ಟೇ ಇತ್ತು ಅನ್ನಿಸುತ್ತೆ.)

  2. ಹಿಂದೆ ನಮಗೆ ಶಾಲೆಯಲ್ಲಿದ್ದ ಒಂದು ಕವನದಲ್ಲಿ ನೆನಪಿರುವ ಸಾಲುಗಳು.(ಕವನ ಬರೆದ ಕವಿವರ್ಯರ ಹೆಸರು ನೆನಪಿಲ್ಲ.)

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    ಹಿಂದು ಮುಸ್ಲಿಂ ಕ್ರೈಸ್ತರೆಲ್ಲರಿಗೊಂದೆ
    ಭಾರತ ಮಂದಿರ
    ಶಾಂತಿ ದಾತನು ಗಾಂಧಿ ತಾತನು
    ಎದೆಯ ಬಾನಿನ ಚಂದಿರ

    ಜಾತಿ ರೋಗದ ಭೀತಿ ತೊಡೆಯುತ
    ನೀತಿ ಮಾರ್ಗದಿ ನಡೆವೆವು
    ಒಂದೆ ಮಾನವ ಕುಲವು ಎನ್ನುತ
    ವಿಶ್ವ ಧರ್ಮವ ಪಡೆವೆವು

    ನಾವು ಎಳೆಯರು ನಾವು ಗೆಳೆಯರು
    ಹೃದಯ ಹೂವಿನ ಹಂದರ
    ನಾಳೆ ನಾವೇ ನಾಡ ಹಿರಿಯರು
    ನಮ್ಮ ಕನಸದೊ ಸುಂದರ.

    (ಮುಂದಿನ ಸಾಲುಗಳು ನೆನಪಾಗುತ್ತಿಲ್ಲ.)

  3. ‘ ನಾವು ಎಳೆಯರು ನಾವು ಗೆಳೆಯರು ‘
    ಕವನ ರಚಿಸಿದ ಕವಿ
    ಶಂ . ಗು . ಬಿರಾದಾರ
    ಇವರು ನನ್ನ ತಂದೆ ಶಂಕರಗೌಡ ಗುರುಗೌಡ ಬಿರಾದಾರ ಇವರ ಪೂರ್ಣ ಹೆಸರು
    ನೆನಪಿಸಿದ ನಿಮಗೆ ಧನ್ಯವಾದಗಳು
    ಪೂರ್ಣ ಕವನ ಕಳಿಸುವೆ

    • ನಿಮಗೂ ಧನ್ಯವಾದಗಳು ಸರ್. ಸಾರ್ವಕಾಲಿಕ ಕವನ ಅದು. ಅದು ಆಡಿಯೋ ಇದ್ದರೆ ಕೊಡಿ.. ಮಕ್ಕಳಿಂದ ನೃತ್ಯ ಮಾಡಿಸಬೇಕು ಎಂದು ಕೆಲವರು ಕೇಳುತ್ತಿದ್ದಾರೆ.

  4. ಈ ಕವನ ರಚಿಸಿದವರು ಶಂ ಗು ಬಿರಾದಾರ
    ಪೂರ್ಣ ಹೆಸರು ಶಂಕರಗೌಡ ಗುರುಗೌಡ ಬಿರಾದಾರ
    ಇವರು ನನ್ನ ತಂದೆ ಪೂರ್ಣ ಕವನ ಕಳಿಸುವೆ

  5. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ

  6. ಸಿರಿಮನೆ ನಾಗರಾಜ್ ಸರ್
    ನನ್ನ ಹತ್ತಿರ ಆಡಿಯೋ ಇದೆ
    ದಯಮಾಡಿ ನನ್ನನ್ನು ಸಂಪರ್ಕಿಸಿ
    9448776817 ಈ ನಂಬರನ್ನು ಸಂಪರ್ಕಿಸಿ

  7. Vijay sir ನನಗೂ ಒಂದು ವಿಡಿಯೋ ಕಳಿಸಿ. ಶಮ್. ಗು. ಬಿರಾದಾರ್ ಸರ್ ಆತ್ಮಕ್ಕೆ ಚಿರ ಋಣಿ.

  8. ಶಂ. ಗು. ಬಿರಾದಾರ ಸರ್ ಆತ್ಮಕ್ಕೆ ನಾನು ಚಿರಋಣಿ. ವಿಜಯ್ ಸರ್,ನನಗೂ ಒಂದು ವಿಡಿಯೊ ಬೇಕು.ನಮ್ಮ ಶಾಲೆಯ ಮಕ್ಕಳಿಗೆ ಕಾರ್ಯಕ್ರಮಕ್ಕೆ ಬೇಕು. ದಯವಿಟ್ಟು ‌‌‌ಸಂಪರ್ಕಿಸಬಹುದೆ!

LEAVE A REPLY

Please enter your comment!
Please enter your name here

- Advertisment -

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...