Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...