Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...