Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...