Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...