Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....