Homeಕರ್ನಾಟಕಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

- Advertisement -
- Advertisement -

ರಸ್ತೆಯ ಅವ್ಯವಸ್ಥೆಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ಉಡುಪಿಯ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಸೆ.13ರಂದು ಉಡುಪಿ ನಗರದ ಇಂದ್ರಾಳಿ ಸೇತುವೆಯ ಗುಂಡಿಗಳಿಗೆ ಆರತಿ ಸಲ್ಲಿಸಿ ರಸ್ತೆಯಲ್ಲಿ ಉರುಳು ಸೇವೆ ಮಾಡಿದ್ದಾರೆ.

‘ಉರುಳು ಸೇವೆ’ ಎಂಬುದು ಹರಕೆಯ ಈಡೇರಿಕೆಗಾಗಿ ದೇವಾಲಯಗಳ ಸುತ್ತ ನೆಲದ ಮೇಲೆ ಉರುಳುವ ಆಚರಣೆಯಾಗಿದೆ.

ತಮ್ಮ ಪ್ರತಿಭಟನೆಯ ಕುರಿತು ಒಳಕಾಡು ಅವರು ಪ್ರತಿಕ್ರಿಯಿಸಿ, “ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ದಯನೀಯ ಸ್ಥಿತಿಯಲ್ಲಿದೆ. ಮೂರು ವರ್ಷಗಳ ಹಿಂದೆಯೇ ಟೆಂಡರ್‌ ಮಂಜೂರು ಮಾಡಲಾಗಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯಾರೂ ಚಕಾರ ಎತ್ತುತ್ತಿಲ್ಲ, ಪ್ರತಿನಿತ್ಯ ಸಾವಿರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಾರೆ, ಮುಖ್ಯಮಂತ್ರಿಯವರೂ ಈ ರಸ್ತೆಯಲ್ಲಿ ಹಾದು ಹೋಗಿದ್ದಾರೆ. ರಸ್ತೆ ದುರಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಮಾರ್ಗದಲ್ಲಿ ಹಾದುಹೋಗಬೇಕಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಉಡುಪಿಯ ಜನರು ಮುಗ್ಧರು” ಎಂದಿರುವ ಅವರು, “ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣ ಪ್ರತಿನಿತ್ಯ ಇಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಇದೇ ಕಾರಣಕ್ಕೆ ಹಲವು ಹಸು, ಕರುಗಳು ಸಾವನ್ನಪ್ಪಿವೆ. ಹಸು, ಕರುಗಳ ಹೆಸರಿನಲ್ಲಿ ಮತ ಕೇಳುವವರಿಗೆ ರಸ್ತೆಯ ಶೋಚನೀಯ ಸ್ಥಿತಿ ಏಕೆ ಕಾಣುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ರಸ್ತೆಯ ಗುಂಡಿಗಳಿಗೆ ತೆಂಗಿನಕಾಯಿ ಒಡೆದು ಆರತಿ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದರು.

ರಸ್ತೆಗಳ ದುಃಸ್ಥಿತಿಯನ್ನು ಎತ್ತಿ ತೋರಿಸಲು ಈ ಹಿಂದೆಯೂ ವಿನೂತನ ರೀತಿಯಲ್ಲಿ ಕರ್ನಾಟಕದ ಜನರು ಪ್ರತಿಭಟನೆ ದಾಖಲಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ‘ಗಗನಯಾತ್ರಿ’ ಮೂನ್‌ವಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಹಿಂದಿನಿಂದಲೂ ರಸ್ತೆಯ ಗುಂಡಿಗಳಲ್ಲಿ ಕಲಾಕೃತಿಗಳನ್ನು ಬರೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಾ ಬಂದಿದ್ದಾರೆ. 2019ರ ಸೆಪ್ಟೆಂಬರ್‌ನಲ್ಲಿ ಗಗನರಾತ್ರಿಯೊಬ್ಬರು ರಸ್ತೆಯಲ್ಲಿ ಚಲಿಸುತ್ತಿರುವಂತೆ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಬಾದಲ್‌ ಅವರ ಈ ಪ್ರಯೋಗಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ಅಕ್ಟೋಬರ್ 2019ರಲ್ಲಿ, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟಿಸಿದ್ದರು. ರಸ್ತೆ ದುಸ್ಥಿತಿಯ ಸಮಸ್ಯೆ ಎಷ್ಟು ‘ಆಳ’ವಾಗಿದೆ ಎಂಬುದನ್ನು ಎತ್ತಿ ತೋರಿಸಲು ರಸ್ತೆ ಗುಂಡಿಯಲ್ಲಿ ‘ಮೀನುಗಾರಿಕೆ’ ಮಾಡಿದ್ದರು. ಜಿಲ್ಲೆಯ ದುರ್ಗಿಗುಡಿ, ತಿಲಕ್‌ನಗರ, ಗಾಂಧಿನಗರದಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...