Homeಕರ್ನಾಟಕಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

- Advertisement -
- Advertisement -

ರಸ್ತೆಯ ಅವ್ಯವಸ್ಥೆಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ಉಡುಪಿಯ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಸೆ.13ರಂದು ಉಡುಪಿ ನಗರದ ಇಂದ್ರಾಳಿ ಸೇತುವೆಯ ಗುಂಡಿಗಳಿಗೆ ಆರತಿ ಸಲ್ಲಿಸಿ ರಸ್ತೆಯಲ್ಲಿ ಉರುಳು ಸೇವೆ ಮಾಡಿದ್ದಾರೆ.

‘ಉರುಳು ಸೇವೆ’ ಎಂಬುದು ಹರಕೆಯ ಈಡೇರಿಕೆಗಾಗಿ ದೇವಾಲಯಗಳ ಸುತ್ತ ನೆಲದ ಮೇಲೆ ಉರುಳುವ ಆಚರಣೆಯಾಗಿದೆ.

ತಮ್ಮ ಪ್ರತಿಭಟನೆಯ ಕುರಿತು ಒಳಕಾಡು ಅವರು ಪ್ರತಿಕ್ರಿಯಿಸಿ, “ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ದಯನೀಯ ಸ್ಥಿತಿಯಲ್ಲಿದೆ. ಮೂರು ವರ್ಷಗಳ ಹಿಂದೆಯೇ ಟೆಂಡರ್‌ ಮಂಜೂರು ಮಾಡಲಾಗಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯಾರೂ ಚಕಾರ ಎತ್ತುತ್ತಿಲ್ಲ, ಪ್ರತಿನಿತ್ಯ ಸಾವಿರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಾರೆ, ಮುಖ್ಯಮಂತ್ರಿಯವರೂ ಈ ರಸ್ತೆಯಲ್ಲಿ ಹಾದು ಹೋಗಿದ್ದಾರೆ. ರಸ್ತೆ ದುರಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಮಾರ್ಗದಲ್ಲಿ ಹಾದುಹೋಗಬೇಕಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಉಡುಪಿಯ ಜನರು ಮುಗ್ಧರು” ಎಂದಿರುವ ಅವರು, “ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣ ಪ್ರತಿನಿತ್ಯ ಇಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಇದೇ ಕಾರಣಕ್ಕೆ ಹಲವು ಹಸು, ಕರುಗಳು ಸಾವನ್ನಪ್ಪಿವೆ. ಹಸು, ಕರುಗಳ ಹೆಸರಿನಲ್ಲಿ ಮತ ಕೇಳುವವರಿಗೆ ರಸ್ತೆಯ ಶೋಚನೀಯ ಸ್ಥಿತಿ ಏಕೆ ಕಾಣುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ರಸ್ತೆಯ ಗುಂಡಿಗಳಿಗೆ ತೆಂಗಿನಕಾಯಿ ಒಡೆದು ಆರತಿ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದರು.

ರಸ್ತೆಗಳ ದುಃಸ್ಥಿತಿಯನ್ನು ಎತ್ತಿ ತೋರಿಸಲು ಈ ಹಿಂದೆಯೂ ವಿನೂತನ ರೀತಿಯಲ್ಲಿ ಕರ್ನಾಟಕದ ಜನರು ಪ್ರತಿಭಟನೆ ದಾಖಲಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ‘ಗಗನಯಾತ್ರಿ’ ಮೂನ್‌ವಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಹಿಂದಿನಿಂದಲೂ ರಸ್ತೆಯ ಗುಂಡಿಗಳಲ್ಲಿ ಕಲಾಕೃತಿಗಳನ್ನು ಬರೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಾ ಬಂದಿದ್ದಾರೆ. 2019ರ ಸೆಪ್ಟೆಂಬರ್‌ನಲ್ಲಿ ಗಗನರಾತ್ರಿಯೊಬ್ಬರು ರಸ್ತೆಯಲ್ಲಿ ಚಲಿಸುತ್ತಿರುವಂತೆ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಬಾದಲ್‌ ಅವರ ಈ ಪ್ರಯೋಗಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ಅಕ್ಟೋಬರ್ 2019ರಲ್ಲಿ, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟಿಸಿದ್ದರು. ರಸ್ತೆ ದುಸ್ಥಿತಿಯ ಸಮಸ್ಯೆ ಎಷ್ಟು ‘ಆಳ’ವಾಗಿದೆ ಎಂಬುದನ್ನು ಎತ್ತಿ ತೋರಿಸಲು ರಸ್ತೆ ಗುಂಡಿಯಲ್ಲಿ ‘ಮೀನುಗಾರಿಕೆ’ ಮಾಡಿದ್ದರು. ಜಿಲ್ಲೆಯ ದುರ್ಗಿಗುಡಿ, ತಿಲಕ್‌ನಗರ, ಗಾಂಧಿನಗರದಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...