Homeಕರ್ನಾಟಕಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

- Advertisement -
- Advertisement -

ರಸ್ತೆಯ ಅವ್ಯವಸ್ಥೆಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ಉಡುಪಿಯ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಸೆ.13ರಂದು ಉಡುಪಿ ನಗರದ ಇಂದ್ರಾಳಿ ಸೇತುವೆಯ ಗುಂಡಿಗಳಿಗೆ ಆರತಿ ಸಲ್ಲಿಸಿ ರಸ್ತೆಯಲ್ಲಿ ಉರುಳು ಸೇವೆ ಮಾಡಿದ್ದಾರೆ.

‘ಉರುಳು ಸೇವೆ’ ಎಂಬುದು ಹರಕೆಯ ಈಡೇರಿಕೆಗಾಗಿ ದೇವಾಲಯಗಳ ಸುತ್ತ ನೆಲದ ಮೇಲೆ ಉರುಳುವ ಆಚರಣೆಯಾಗಿದೆ.

ತಮ್ಮ ಪ್ರತಿಭಟನೆಯ ಕುರಿತು ಒಳಕಾಡು ಅವರು ಪ್ರತಿಕ್ರಿಯಿಸಿ, “ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ದಯನೀಯ ಸ್ಥಿತಿಯಲ್ಲಿದೆ. ಮೂರು ವರ್ಷಗಳ ಹಿಂದೆಯೇ ಟೆಂಡರ್‌ ಮಂಜೂರು ಮಾಡಲಾಗಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯಾರೂ ಚಕಾರ ಎತ್ತುತ್ತಿಲ್ಲ, ಪ್ರತಿನಿತ್ಯ ಸಾವಿರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಾರೆ, ಮುಖ್ಯಮಂತ್ರಿಯವರೂ ಈ ರಸ್ತೆಯಲ್ಲಿ ಹಾದು ಹೋಗಿದ್ದಾರೆ. ರಸ್ತೆ ದುರಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಮಾರ್ಗದಲ್ಲಿ ಹಾದುಹೋಗಬೇಕಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಉಡುಪಿಯ ಜನರು ಮುಗ್ಧರು” ಎಂದಿರುವ ಅವರು, “ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣ ಪ್ರತಿನಿತ್ಯ ಇಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಇದೇ ಕಾರಣಕ್ಕೆ ಹಲವು ಹಸು, ಕರುಗಳು ಸಾವನ್ನಪ್ಪಿವೆ. ಹಸು, ಕರುಗಳ ಹೆಸರಿನಲ್ಲಿ ಮತ ಕೇಳುವವರಿಗೆ ರಸ್ತೆಯ ಶೋಚನೀಯ ಸ್ಥಿತಿ ಏಕೆ ಕಾಣುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ರಸ್ತೆಯ ಗುಂಡಿಗಳಿಗೆ ತೆಂಗಿನಕಾಯಿ ಒಡೆದು ಆರತಿ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದರು.

ರಸ್ತೆಗಳ ದುಃಸ್ಥಿತಿಯನ್ನು ಎತ್ತಿ ತೋರಿಸಲು ಈ ಹಿಂದೆಯೂ ವಿನೂತನ ರೀತಿಯಲ್ಲಿ ಕರ್ನಾಟಕದ ಜನರು ಪ್ರತಿಭಟನೆ ದಾಖಲಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ‘ಗಗನಯಾತ್ರಿ’ ಮೂನ್‌ವಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಹಿಂದಿನಿಂದಲೂ ರಸ್ತೆಯ ಗುಂಡಿಗಳಲ್ಲಿ ಕಲಾಕೃತಿಗಳನ್ನು ಬರೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಾ ಬಂದಿದ್ದಾರೆ. 2019ರ ಸೆಪ್ಟೆಂಬರ್‌ನಲ್ಲಿ ಗಗನರಾತ್ರಿಯೊಬ್ಬರು ರಸ್ತೆಯಲ್ಲಿ ಚಲಿಸುತ್ತಿರುವಂತೆ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಬಾದಲ್‌ ಅವರ ಈ ಪ್ರಯೋಗಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ಅಕ್ಟೋಬರ್ 2019ರಲ್ಲಿ, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟಿಸಿದ್ದರು. ರಸ್ತೆ ದುಸ್ಥಿತಿಯ ಸಮಸ್ಯೆ ಎಷ್ಟು ‘ಆಳ’ವಾಗಿದೆ ಎಂಬುದನ್ನು ಎತ್ತಿ ತೋರಿಸಲು ರಸ್ತೆ ಗುಂಡಿಯಲ್ಲಿ ‘ಮೀನುಗಾರಿಕೆ’ ಮಾಡಿದ್ದರು. ಜಿಲ್ಲೆಯ ದುರ್ಗಿಗುಡಿ, ತಿಲಕ್‌ನಗರ, ಗಾಂಧಿನಗರದಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...