Homeಕರ್ನಾಟಕಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ!

- Advertisement -
- Advertisement -

ರಸ್ತೆಯ ಅವ್ಯವಸ್ಥೆಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ಉಡುಪಿಯ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಸೆ.13ರಂದು ಉಡುಪಿ ನಗರದ ಇಂದ್ರಾಳಿ ಸೇತುವೆಯ ಗುಂಡಿಗಳಿಗೆ ಆರತಿ ಸಲ್ಲಿಸಿ ರಸ್ತೆಯಲ್ಲಿ ಉರುಳು ಸೇವೆ ಮಾಡಿದ್ದಾರೆ.

‘ಉರುಳು ಸೇವೆ’ ಎಂಬುದು ಹರಕೆಯ ಈಡೇರಿಕೆಗಾಗಿ ದೇವಾಲಯಗಳ ಸುತ್ತ ನೆಲದ ಮೇಲೆ ಉರುಳುವ ಆಚರಣೆಯಾಗಿದೆ.

ತಮ್ಮ ಪ್ರತಿಭಟನೆಯ ಕುರಿತು ಒಳಕಾಡು ಅವರು ಪ್ರತಿಕ್ರಿಯಿಸಿ, “ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿ ದಯನೀಯ ಸ್ಥಿತಿಯಲ್ಲಿದೆ. ಮೂರು ವರ್ಷಗಳ ಹಿಂದೆಯೇ ಟೆಂಡರ್‌ ಮಂಜೂರು ಮಾಡಲಾಗಿದ್ದರೂ ಯಾವುದೇ ಅಭಿವೃದ್ಧಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯಾರೂ ಚಕಾರ ಎತ್ತುತ್ತಿಲ್ಲ, ಪ್ರತಿನಿತ್ಯ ಸಾವಿರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಾರೆ, ಮುಖ್ಯಮಂತ್ರಿಯವರೂ ಈ ರಸ್ತೆಯಲ್ಲಿ ಹಾದು ಹೋಗಿದ್ದಾರೆ. ರಸ್ತೆ ದುರಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅಥವಾ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಮಾರ್ಗದಲ್ಲಿ ಹಾದುಹೋಗಬೇಕಿದೆ” ಎಂದು ವ್ಯಂಗ್ಯವಾಡಿದ್ದಾರೆ.

“ಉಡುಪಿಯ ಜನರು ಮುಗ್ಧರು” ಎಂದಿರುವ ಅವರು, “ರಸ್ತೆಯಲ್ಲಿ ಬೀದಿ ದೀಪಗಳಿಲ್ಲದ ಕಾರಣ ಪ್ರತಿನಿತ್ಯ ಇಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಇದೇ ಕಾರಣಕ್ಕೆ ಹಲವು ಹಸು, ಕರುಗಳು ಸಾವನ್ನಪ್ಪಿವೆ. ಹಸು, ಕರುಗಳ ಹೆಸರಿನಲ್ಲಿ ಮತ ಕೇಳುವವರಿಗೆ ರಸ್ತೆಯ ಶೋಚನೀಯ ಸ್ಥಿತಿ ಏಕೆ ಕಾಣುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ರಸ್ತೆಯ ಗುಂಡಿಗಳಿಗೆ ತೆಂಗಿನಕಾಯಿ ಒಡೆದು ಆರತಿ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಿಸಿದ್ದರು.

ರಸ್ತೆಗಳ ದುಃಸ್ಥಿತಿಯನ್ನು ಎತ್ತಿ ತೋರಿಸಲು ಈ ಹಿಂದೆಯೂ ವಿನೂತನ ರೀತಿಯಲ್ಲಿ ಕರ್ನಾಟಕದ ಜನರು ಪ್ರತಿಭಟನೆ ದಾಖಲಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ‘ಗಗನಯಾತ್ರಿ’ ಮೂನ್‌ವಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಕಲಾವಿದ ಬಾದಲ್ ನಂಜುಂಡಸ್ವಾಮಿ ಅವರು ಹಿಂದಿನಿಂದಲೂ ರಸ್ತೆಯ ಗುಂಡಿಗಳಲ್ಲಿ ಕಲಾಕೃತಿಗಳನ್ನು ಬರೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುತ್ತಾ ಬಂದಿದ್ದಾರೆ. 2019ರ ಸೆಪ್ಟೆಂಬರ್‌ನಲ್ಲಿ ಗಗನರಾತ್ರಿಯೊಬ್ಬರು ರಸ್ತೆಯಲ್ಲಿ ಚಲಿಸುತ್ತಿರುವಂತೆ ವಿಡಿಯೊ ಮಾಡಿ ಹರಿಬಿಟ್ಟಿದ್ದರು. ಬಾದಲ್‌ ಅವರ ಈ ಪ್ರಯೋಗಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.

ಅಕ್ಟೋಬರ್ 2019ರಲ್ಲಿ, ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟಿಸಿದ್ದರು. ರಸ್ತೆ ದುಸ್ಥಿತಿಯ ಸಮಸ್ಯೆ ಎಷ್ಟು ‘ಆಳ’ವಾಗಿದೆ ಎಂಬುದನ್ನು ಎತ್ತಿ ತೋರಿಸಲು ರಸ್ತೆ ಗುಂಡಿಯಲ್ಲಿ ‘ಮೀನುಗಾರಿಕೆ’ ಮಾಡಿದ್ದರು. ಜಿಲ್ಲೆಯ ದುರ್ಗಿಗುಡಿ, ತಿಲಕ್‌ನಗರ, ಗಾಂಧಿನಗರದಲ್ಲಿ ರಸ್ತೆ ಹದಗೆಟ್ಟಿರುವ ಬಗ್ಗೆ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...