Homeಮುಖಪುಟವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

ವಿಶ್ವವಿದ್ಯಾಲಯಗಳಲ್ಲಿ ಮೋದಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ ಹಾಕಲು ಯುಜಿಸಿ ಸೂಚನೆ

- Advertisement -
- Advertisement -

ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೊರೊನಾ ಲಸಿಕೆ ನೀಡುವ ಲಸಿಕಾ ಅಭಿಯಾನ ಆಂಭಿಸಿರುವುದಕ್ಕೆ ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸುವ ಬ್ಯಾನರ್‌ಗಳನ್ನು ಅಳವಡಿಸುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಎಲ್ಲಾ ವಿಶ್ವವಿದ್ಯಾಲಯಗಳು, ಕಾಲೇಜುಗಳು ಮತ್ತು ತಾಂತ್ರಿಕ ಸಂಸ್ಥೆಗಳಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಜೂನ್ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಘೋಷಿಸಿದ ಕೊರೊನಾ ಲಸಿಕೆ ಅಭಿಯಾನದ ಪರಿಷ್ಕೃತ ಮಾರ್ಗಸೂಚಿಗಳು ಸೋಮವಾರದಿಂದ (ಜೂನ್  21) ಜಾರಿಗೆ ಬಂದಿವೆ. ಈ ಮಾರ್ಗಸೂಚಿಗಳ ಪ್ರಕಾರ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಉಚಿತ ವ್ಯಾಕ್ಸಿನೇಷನ್ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಲಾಗಿದೆ.

ಈ ಅಭಿಯಾನವನ್ನು ವಿಶ್ವದಲ್ಲೇ ಅತಿ ದೊಡ್ಡ ಲಸಿಕಾ ಅಭಿಯಾನ ಎಂದು ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುತ್ತಿವೆ. ಲಸಿಕೆ ನೀಡಿದಕ್ಕಾಗಿ ಧನ್ಯವಾದ ಮೋದಿಜಿ ಎಂಬ ಬ್ಯಾನರ್‌ಗಳು  ಇಲ್ಲ ಕಡೆಗಳಲ್ಲಿ ಹಾಕಲಾಗುತ್ತಿದೆ. ಈಗ ಯುಜಿಸಿ ಕೂಡ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಈ ಬ್ಯಾನರ್ ಅಳವಡಿಸಲು ಸೂಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

Image
PC: twitter@UnivofDelhi

ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್, ವಿಶ್ವವಿದ್ಯಾಲಯದ ವಿವಿಧ ಅಧಿಕಾರಿಗಳಿಗೆ ಭಾನುವಾರ ಕಳುಹಿಸಿರುವ ವಾಟ್ಸಾಪ್ ಸಂದೇಶದಲ್ಲಿ, ಅಧಿಕಾರಿಗಳು ಧನ್ಯವಾದ ಸೂಚಿಸುವ ಈ ಬ್ಯಾನರ್‌ಗಳನ್ನು ತಮ್ಮ ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿಯೂ ಹಂಚಿಕೊಳ್ಳಲು ತಿಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮೂರು ವಿಶ್ವವಿದ್ಯಾಲಯಗಳ ಅಧಿಕಾರಿಗಳು ಸೂಚನೆ ಬಂದಿರುವುದನ್ನು ದೃಢಪಡಿಸಿದ್ದಾರೆ.

“ಭಾರತ ಸರ್ಕಾರವು ಜೂನ್ 21 ರಿಂದ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಉಚಿತ ವ್ಯಾಕ್ಸಿನೇಷನ್ ಪ್ರಾರಂಭಿಸುತ್ತಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಈ ಹೋರ್ಡಿಂಗ್ ಮತ್ತು ಬ್ಯಾನರ್‌ಗಳನ್ನು ತಮ್ಮ ಸಂಸ್ಥೆಗಳಲ್ಲಿ ಪ್ರದರ್ಶಿಸುವಂತೆ ಕೋರಲಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಒದಗಿಸಿದಂತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿರುವ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳ  ಡಿಸೈನ್‌ಗಳನ್ನು ಲಗತ್ತಿಸಲಾಗಿದೆ” ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು ಸಂದೇಶ ಕಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

ದೆಹಲಿ ವಿಶ್ವವಿದ್ಯಾಲಯ, ಹೈದರಾಬಾದ್ ವಿಶ್ವವಿದ್ಯಾಲಯ, ಭೋಪಾಲ್‌ನ ಎಲ್‌ಎನ್‌ಸಿಟಿ ವಿಶ್ವವಿದ್ಯಾಲಯ, ಬೆನೆಟ್ ವಿಶ್ವವಿದ್ಯಾಲಯ, ಗುರಗಾಂವ್‌ನ ನಾರ್ತ್‌ಕ್ಯಾಪ್ ವಿಶ್ವವಿದ್ಯಾಲಯ ಮುಂತಾದ ಸಂಸ್ಥೆಗಳು ತಮ್ಮ ಸಾಮಾಜಿಕ ಮಾಧ್ಯಮ ಪುಟಗಳಲ್ಲಿ “ಧನ್ಯವಾದ ಮೋದಿಜಿ” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬ್ಯಾನರ್‌ಗಳನ್ನು ಹಂಚಿಕೊಂಡಿವೆ.

ಯುಜಿಸಿಯ ಈ ಕ್ರಮವನ್ನು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು ಮತ್ತು ರಾಜಕಾರಣಿಗಳು ಸೇರಿದಂತೆ ಹಲವರು ಟೀಕಿಸಿದ್ದಾರೆ.

ಸ್ವರಾಜ್  ಇಂಡಿಯಾದ ಅಧ್ಯಕ್ಷ ಮತ್ತು ಯುಜಿಸಿ ಮಾಜಿ ಸದಸ್ಯ ಯೋಗೇಂದ್ರ ಯಾದವ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಯುಜಿಸಿಯ ಮಾಜಿ ಸದಸ್ಯನಾಗಿ ಈ ಕ್ರಮದಿಂದ ನಾನು ಮುಜುಗರಕ್ಕೆ ಒಳಗಾಗಿದ್ದೇನೆ ಎಂದಿದ್ದಾರೆ.

 


ಇದನ್ನೂ ಓದಿ: IISC ಶೂಟೌಟ್ ಪ್ರಕರಣ: 4 ವರ್ಷದ ನಂತರ UAPA ಆರೋಪಿಯನ್ನು ಖುಲಾಸೆಗೊಳಿಸಿದ NIA ನ್ಯಾಯಾಲಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...