Homeಮುಖಪುಟವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

ವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

- Advertisement -
- Advertisement -

ಗುಜರಾತ್ ಮತ್ತು ಅಸ್ಸಾಂನಲ್ಲಿ ನಾಳೆ ಪ್ರಧಾನಿ ಮೋದಿ ನೆರವೇರಿಸಿ ಕೊಡಲಿರುವ ವಿವಿಧ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳ ಭಾಷಣವನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಗುಜರಾತ್‌ನ ಧೋಲೇರಾ ಮತ್ತು ಸನಂದ್ ಹಾಗೂ ಅಸ್ಸಾಂನ ಮೋರಿಗಾಂವ್‌ನಲ್ಲಿ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಇದನ್ನು “ಪ್ರಚಾರ ಕಾರ್ಯಕ್ರಮ” ಎಂದು ಕರೆದ ಕೆಲವು ಶಿಕ್ಷಣ ತಜ್ಞರು, ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದು 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರನ್ನು ತಲುಪುವ  ಬಿಜೆಪಿಯ ಕೊನೆಯ ಪ್ರಯತ್ನದ ಭಾಗವಾಗಿದೆ ಎಂದು ಹೇಳಲಾಗಿದೆ.

ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಮೋದಿಯ ಚಿತ್ರವಿರುವ ‘ವಿಕಸಿತ್‌ ಭಾರತ್’ ಪೋಸ್ಟರ್‌ಗಳನ್ನು ಹಾಕುವಂತೆ ಶಿಕ್ಷಣ ಸಚಿವಾಲಯ ಸಂಸ್ಥೆಗಳಿಗೆ ಸೂಚಿಸಿದೆ. ಕಾರ್ಯಕ್ರಮದ ನಂತರ ತನ್ನ ನಿಯಂತ್ರಣದಲ್ಲಿರುವ ಸಂಸ್ಥೆಗಳು ತಮ್ಮ ಈ ಆದೇಶದ ಅನುಸರಣೆ ವರದಿಗಳನ್ನು ಕಳುಹಿಸಬೇಕೆಂದು ಸಚಿವಾಲಯ ಬಯಸುತ್ತದೆ ಎಂದು ಟೆಲಿಗ್ರಾಫ್ ವರದಿ ಉಲ್ಲೇಖಿಸಿದೆ. ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ರಾಜ್ಯ ಮಟ್ಟದ ವಿಶ್ವವಿದ್ಯಾನಿಲಯಗಳು ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳು ಸೇರಿದಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಈ ಬಗ್ಗೆ ಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಕುರಿತು ಸಂಸ್ಥೆಗಳ ಉಪಕುಲಪತಿಗಳಿಗೆ ಕಳುಹಿಸಲಾದ ಪತ್ರದ ಜೊತೆಗೆ ಕಾರ್ಯಕ್ರಮದ ಸ್ಥಳಗಳಲ್ಲಿ ಅಳವಡಿಸಬೇಕಾದ ಐದು ಪೋಸ್ಟರ್‌ಗಳ ವಿನ್ಯಾಸಗಳನ್ನು ಲಗತ್ತಿಸಲಾಗಿದೆ. ಪೋಸ್ಟರ್‌ಗಳಲ್ಲಿ ವಿಕಸಿತ್‌ ಭಾರತ್ ಎಂದು ಉಲ್ಲೇಖಿಸಲಾಗಿದೆ ಮತ್ತು ಸೆಮಿಕಂಡಕ್ಟರ್ ಪ್ಯಾಕಟರಿಗಳಿಗೆ ಮೋದಿ ಅಡಿಗಲ್ಲು ಹಾಕುತ್ತಿರುವ ಪೋಟೋಗಳು ಕೂಡ ಅದರಲ್ಲಿ ಕಂಡು ಬರುತ್ತಿದೆ. ಈವೆಂಟ್‌ಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಲಗತ್ತಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪ್ರಚಾರ ಮಾಡಲು ಮತ್ತು ವಿಕಸಿತ್‌ ಭಾರತ್‌ನ ದೃಷ್ಟಿಗೆ ಕಾರಣವಾಗುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರನ್ನು ಪ್ರೋತ್ಸಾಹಿಸಲು ವಿನಂತಿಸಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಈ ಪ್ರಯತ್ನದ ಪ್ರಮುಖ ಪಾಲುದಾರರಾಗಿದ್ದಾರೆ, ಆದ್ದರಿಂದ, ಎಲ್ಲಾ ವಿಶ್ವವಿದ್ಯಾನಿಲಯಗಳು ಅಗತ್ಯ ವ್ಯವಸ್ಥೆಯನ್ನು ಮಾಡಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳು, ವಿಶೇಷವಾಗಿ STEM ಮತ್ತು ತಾಂತ್ರಿಕ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮಿರಾಂಡಾ ಹೌಸ್ ಕಾಲೇಜಿನ ಅಧ್ಯಾಪಕ ಸದಸ್ಯ ಅಭಾ ದೇವ್ ಹಬೀಬ್, ಇದು ಶಿಕ್ಷಣ ಸಂಸ್ಥೆಗಳ ಮೇಲಿನ ಸರಕಾರದ ಹಸ್ತಕ್ಷೇಪವಾಗಿದೆ. ಇದು ಸಂಪೂರ್ಣವಾಗಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮವಾಗಿದೆ. ಸಂಶೋಧಕರು ಮತ್ತು ಅಧ್ಯಾಪಕರು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸಬೇಕು. ಆದರೆ ಅವರು ಪ್ರಚಾರ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ ಸದಸ್ಯ ಅಶೋಕ್ ಅಗರವಾಲ್, ನಿರ್ದೇಶನಗಳನ್ನು ರಾಜಕೀಯ ಪ್ರೇರಿತ ಮತ್ತು ತಪ್ಪು ಎಂದು ಕರೆದಿದ್ದಾರೆ.  ವಿಶ್ವವಿದ್ಯಾನಿಲಯಗಳು ಸ್ವಾಯತ್ತವಾಗಿವೆ. ಅಂತಹ ನಿರ್ದೇಶನಗಳನ್ನು ನಿರ್ಲಕ್ಷಿಸುವ ಶಕ್ತಿ ಅವರಿಗೆ ಇದೆ. ಆದರೆ ಸರ್ಕಾರವು ಅವರನ್ನು ಬಲಿಪಶು ಮಾಡುವುದರಿಂದ ಸಂಸ್ಥೆಗಳು ನಿರ್ಲಕ್ಷಿಸುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಯುಜಿಸಿ ದೇಶದ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಮೋದಿ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (BBBP) ಲಾಂಛನವನ್ನು ಆವರಣದಲ್ಲಿ ಸ್ಥಾಪಿಸುವಂತೆ ಕೇಳಿಕೊಂಡಿತ್ತು. ಮೋದಿ ಪೋಟೋ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಳಿಕೊಂಡಿತ್ತು. ಇದಕ್ಕೆ ಪ್ರತಿಪಕ್ಷಗಳು ತೀವ್ರವಾದ ವಿರೋಧನ್ನು ವ್ಯಕ್ತಪಡಿಸಿದ್ದವು.

ಇದನ್ನು ಓದಿ: CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...