Homeಮುಖಪುಟವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

ವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

- Advertisement -
- Advertisement -

ಗುಜರಾತ್ ಮತ್ತು ಅಸ್ಸಾಂನಲ್ಲಿ ನಾಳೆ ಪ್ರಧಾನಿ ಮೋದಿ ನೆರವೇರಿಸಿ ಕೊಡಲಿರುವ ವಿವಿಧ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳ ಭಾಷಣವನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಗುಜರಾತ್‌ನ ಧೋಲೇರಾ ಮತ್ತು ಸನಂದ್ ಹಾಗೂ ಅಸ್ಸಾಂನ ಮೋರಿಗಾಂವ್‌ನಲ್ಲಿ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಇದನ್ನು “ಪ್ರಚಾರ ಕಾರ್ಯಕ್ರಮ” ಎಂದು ಕರೆದ ಕೆಲವು ಶಿಕ್ಷಣ ತಜ್ಞರು, ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದು 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರನ್ನು ತಲುಪುವ  ಬಿಜೆಪಿಯ ಕೊನೆಯ ಪ್ರಯತ್ನದ ಭಾಗವಾಗಿದೆ ಎಂದು ಹೇಳಲಾಗಿದೆ.

ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಮೋದಿಯ ಚಿತ್ರವಿರುವ ‘ವಿಕಸಿತ್‌ ಭಾರತ್’ ಪೋಸ್ಟರ್‌ಗಳನ್ನು ಹಾಕುವಂತೆ ಶಿಕ್ಷಣ ಸಚಿವಾಲಯ ಸಂಸ್ಥೆಗಳಿಗೆ ಸೂಚಿಸಿದೆ. ಕಾರ್ಯಕ್ರಮದ ನಂತರ ತನ್ನ ನಿಯಂತ್ರಣದಲ್ಲಿರುವ ಸಂಸ್ಥೆಗಳು ತಮ್ಮ ಈ ಆದೇಶದ ಅನುಸರಣೆ ವರದಿಗಳನ್ನು ಕಳುಹಿಸಬೇಕೆಂದು ಸಚಿವಾಲಯ ಬಯಸುತ್ತದೆ ಎಂದು ಟೆಲಿಗ್ರಾಫ್ ವರದಿ ಉಲ್ಲೇಖಿಸಿದೆ. ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ರಾಜ್ಯ ಮಟ್ಟದ ವಿಶ್ವವಿದ್ಯಾನಿಲಯಗಳು ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳು ಸೇರಿದಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಈ ಬಗ್ಗೆ ಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಕುರಿತು ಸಂಸ್ಥೆಗಳ ಉಪಕುಲಪತಿಗಳಿಗೆ ಕಳುಹಿಸಲಾದ ಪತ್ರದ ಜೊತೆಗೆ ಕಾರ್ಯಕ್ರಮದ ಸ್ಥಳಗಳಲ್ಲಿ ಅಳವಡಿಸಬೇಕಾದ ಐದು ಪೋಸ್ಟರ್‌ಗಳ ವಿನ್ಯಾಸಗಳನ್ನು ಲಗತ್ತಿಸಲಾಗಿದೆ. ಪೋಸ್ಟರ್‌ಗಳಲ್ಲಿ ವಿಕಸಿತ್‌ ಭಾರತ್ ಎಂದು ಉಲ್ಲೇಖಿಸಲಾಗಿದೆ ಮತ್ತು ಸೆಮಿಕಂಡಕ್ಟರ್ ಪ್ಯಾಕಟರಿಗಳಿಗೆ ಮೋದಿ ಅಡಿಗಲ್ಲು ಹಾಕುತ್ತಿರುವ ಪೋಟೋಗಳು ಕೂಡ ಅದರಲ್ಲಿ ಕಂಡು ಬರುತ್ತಿದೆ. ಈವೆಂಟ್‌ಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಲಗತ್ತಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪ್ರಚಾರ ಮಾಡಲು ಮತ್ತು ವಿಕಸಿತ್‌ ಭಾರತ್‌ನ ದೃಷ್ಟಿಗೆ ಕಾರಣವಾಗುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರನ್ನು ಪ್ರೋತ್ಸಾಹಿಸಲು ವಿನಂತಿಸಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಈ ಪ್ರಯತ್ನದ ಪ್ರಮುಖ ಪಾಲುದಾರರಾಗಿದ್ದಾರೆ, ಆದ್ದರಿಂದ, ಎಲ್ಲಾ ವಿಶ್ವವಿದ್ಯಾನಿಲಯಗಳು ಅಗತ್ಯ ವ್ಯವಸ್ಥೆಯನ್ನು ಮಾಡಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳು, ವಿಶೇಷವಾಗಿ STEM ಮತ್ತು ತಾಂತ್ರಿಕ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮಿರಾಂಡಾ ಹೌಸ್ ಕಾಲೇಜಿನ ಅಧ್ಯಾಪಕ ಸದಸ್ಯ ಅಭಾ ದೇವ್ ಹಬೀಬ್, ಇದು ಶಿಕ್ಷಣ ಸಂಸ್ಥೆಗಳ ಮೇಲಿನ ಸರಕಾರದ ಹಸ್ತಕ್ಷೇಪವಾಗಿದೆ. ಇದು ಸಂಪೂರ್ಣವಾಗಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮವಾಗಿದೆ. ಸಂಶೋಧಕರು ಮತ್ತು ಅಧ್ಯಾಪಕರು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸಬೇಕು. ಆದರೆ ಅವರು ಪ್ರಚಾರ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ ಸದಸ್ಯ ಅಶೋಕ್ ಅಗರವಾಲ್, ನಿರ್ದೇಶನಗಳನ್ನು ರಾಜಕೀಯ ಪ್ರೇರಿತ ಮತ್ತು ತಪ್ಪು ಎಂದು ಕರೆದಿದ್ದಾರೆ.  ವಿಶ್ವವಿದ್ಯಾನಿಲಯಗಳು ಸ್ವಾಯತ್ತವಾಗಿವೆ. ಅಂತಹ ನಿರ್ದೇಶನಗಳನ್ನು ನಿರ್ಲಕ್ಷಿಸುವ ಶಕ್ತಿ ಅವರಿಗೆ ಇದೆ. ಆದರೆ ಸರ್ಕಾರವು ಅವರನ್ನು ಬಲಿಪಶು ಮಾಡುವುದರಿಂದ ಸಂಸ್ಥೆಗಳು ನಿರ್ಲಕ್ಷಿಸುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಯುಜಿಸಿ ದೇಶದ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಮೋದಿ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (BBBP) ಲಾಂಛನವನ್ನು ಆವರಣದಲ್ಲಿ ಸ್ಥಾಪಿಸುವಂತೆ ಕೇಳಿಕೊಂಡಿತ್ತು. ಮೋದಿ ಪೋಟೋ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಳಿಕೊಂಡಿತ್ತು. ಇದಕ್ಕೆ ಪ್ರತಿಪಕ್ಷಗಳು ತೀವ್ರವಾದ ವಿರೋಧನ್ನು ವ್ಯಕ್ತಪಡಿಸಿದ್ದವು.

ಇದನ್ನು ಓದಿ: CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...