Homeಮುಖಪುಟವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

ವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

- Advertisement -
- Advertisement -

ಗುಜರಾತ್ ಮತ್ತು ಅಸ್ಸಾಂನಲ್ಲಿ ನಾಳೆ ಪ್ರಧಾನಿ ಮೋದಿ ನೆರವೇರಿಸಿ ಕೊಡಲಿರುವ ವಿವಿಧ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳ ಭಾಷಣವನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಗುಜರಾತ್‌ನ ಧೋಲೇರಾ ಮತ್ತು ಸನಂದ್ ಹಾಗೂ ಅಸ್ಸಾಂನ ಮೋರಿಗಾಂವ್‌ನಲ್ಲಿ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಇದನ್ನು “ಪ್ರಚಾರ ಕಾರ್ಯಕ್ರಮ” ಎಂದು ಕರೆದ ಕೆಲವು ಶಿಕ್ಷಣ ತಜ್ಞರು, ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದು 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರನ್ನು ತಲುಪುವ  ಬಿಜೆಪಿಯ ಕೊನೆಯ ಪ್ರಯತ್ನದ ಭಾಗವಾಗಿದೆ ಎಂದು ಹೇಳಲಾಗಿದೆ.

ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಮೋದಿಯ ಚಿತ್ರವಿರುವ ‘ವಿಕಸಿತ್‌ ಭಾರತ್’ ಪೋಸ್ಟರ್‌ಗಳನ್ನು ಹಾಕುವಂತೆ ಶಿಕ್ಷಣ ಸಚಿವಾಲಯ ಸಂಸ್ಥೆಗಳಿಗೆ ಸೂಚಿಸಿದೆ. ಕಾರ್ಯಕ್ರಮದ ನಂತರ ತನ್ನ ನಿಯಂತ್ರಣದಲ್ಲಿರುವ ಸಂಸ್ಥೆಗಳು ತಮ್ಮ ಈ ಆದೇಶದ ಅನುಸರಣೆ ವರದಿಗಳನ್ನು ಕಳುಹಿಸಬೇಕೆಂದು ಸಚಿವಾಲಯ ಬಯಸುತ್ತದೆ ಎಂದು ಟೆಲಿಗ್ರಾಫ್ ವರದಿ ಉಲ್ಲೇಖಿಸಿದೆ. ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ರಾಜ್ಯ ಮಟ್ಟದ ವಿಶ್ವವಿದ್ಯಾನಿಲಯಗಳು ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳು ಸೇರಿದಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಈ ಬಗ್ಗೆ ಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಕುರಿತು ಸಂಸ್ಥೆಗಳ ಉಪಕುಲಪತಿಗಳಿಗೆ ಕಳುಹಿಸಲಾದ ಪತ್ರದ ಜೊತೆಗೆ ಕಾರ್ಯಕ್ರಮದ ಸ್ಥಳಗಳಲ್ಲಿ ಅಳವಡಿಸಬೇಕಾದ ಐದು ಪೋಸ್ಟರ್‌ಗಳ ವಿನ್ಯಾಸಗಳನ್ನು ಲಗತ್ತಿಸಲಾಗಿದೆ. ಪೋಸ್ಟರ್‌ಗಳಲ್ಲಿ ವಿಕಸಿತ್‌ ಭಾರತ್ ಎಂದು ಉಲ್ಲೇಖಿಸಲಾಗಿದೆ ಮತ್ತು ಸೆಮಿಕಂಡಕ್ಟರ್ ಪ್ಯಾಕಟರಿಗಳಿಗೆ ಮೋದಿ ಅಡಿಗಲ್ಲು ಹಾಕುತ್ತಿರುವ ಪೋಟೋಗಳು ಕೂಡ ಅದರಲ್ಲಿ ಕಂಡು ಬರುತ್ತಿದೆ. ಈವೆಂಟ್‌ಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಲಗತ್ತಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪ್ರಚಾರ ಮಾಡಲು ಮತ್ತು ವಿಕಸಿತ್‌ ಭಾರತ್‌ನ ದೃಷ್ಟಿಗೆ ಕಾರಣವಾಗುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರನ್ನು ಪ್ರೋತ್ಸಾಹಿಸಲು ವಿನಂತಿಸಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಈ ಪ್ರಯತ್ನದ ಪ್ರಮುಖ ಪಾಲುದಾರರಾಗಿದ್ದಾರೆ, ಆದ್ದರಿಂದ, ಎಲ್ಲಾ ವಿಶ್ವವಿದ್ಯಾನಿಲಯಗಳು ಅಗತ್ಯ ವ್ಯವಸ್ಥೆಯನ್ನು ಮಾಡಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳು, ವಿಶೇಷವಾಗಿ STEM ಮತ್ತು ತಾಂತ್ರಿಕ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮಿರಾಂಡಾ ಹೌಸ್ ಕಾಲೇಜಿನ ಅಧ್ಯಾಪಕ ಸದಸ್ಯ ಅಭಾ ದೇವ್ ಹಬೀಬ್, ಇದು ಶಿಕ್ಷಣ ಸಂಸ್ಥೆಗಳ ಮೇಲಿನ ಸರಕಾರದ ಹಸ್ತಕ್ಷೇಪವಾಗಿದೆ. ಇದು ಸಂಪೂರ್ಣವಾಗಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮವಾಗಿದೆ. ಸಂಶೋಧಕರು ಮತ್ತು ಅಧ್ಯಾಪಕರು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸಬೇಕು. ಆದರೆ ಅವರು ಪ್ರಚಾರ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ ಸದಸ್ಯ ಅಶೋಕ್ ಅಗರವಾಲ್, ನಿರ್ದೇಶನಗಳನ್ನು ರಾಜಕೀಯ ಪ್ರೇರಿತ ಮತ್ತು ತಪ್ಪು ಎಂದು ಕರೆದಿದ್ದಾರೆ.  ವಿಶ್ವವಿದ್ಯಾನಿಲಯಗಳು ಸ್ವಾಯತ್ತವಾಗಿವೆ. ಅಂತಹ ನಿರ್ದೇಶನಗಳನ್ನು ನಿರ್ಲಕ್ಷಿಸುವ ಶಕ್ತಿ ಅವರಿಗೆ ಇದೆ. ಆದರೆ ಸರ್ಕಾರವು ಅವರನ್ನು ಬಲಿಪಶು ಮಾಡುವುದರಿಂದ ಸಂಸ್ಥೆಗಳು ನಿರ್ಲಕ್ಷಿಸುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಯುಜಿಸಿ ದೇಶದ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಮೋದಿ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (BBBP) ಲಾಂಛನವನ್ನು ಆವರಣದಲ್ಲಿ ಸ್ಥಾಪಿಸುವಂತೆ ಕೇಳಿಕೊಂಡಿತ್ತು. ಮೋದಿ ಪೋಟೋ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಳಿಕೊಂಡಿತ್ತು. ಇದಕ್ಕೆ ಪ್ರತಿಪಕ್ಷಗಳು ತೀವ್ರವಾದ ವಿರೋಧನ್ನು ವ್ಯಕ್ತಪಡಿಸಿದ್ದವು.

ಇದನ್ನು ಓದಿ: CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...