Homeಮುಖಪುಟವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

ವಿವಿಗಳಲ್ಲಿ ಮೋದಿಯ ಭಾಷಣ ಪ್ರಸಾರ ಮಾಡುವಂತೆ, ಪೊಸ್ಟರ್ ಹಾಕುವಂತೆ ಯುಜಿಸಿ ನಿರ್ದೇಶನ

- Advertisement -
- Advertisement -

ಗುಜರಾತ್ ಮತ್ತು ಅಸ್ಸಾಂನಲ್ಲಿ ನಾಳೆ ಪ್ರಧಾನಿ ಮೋದಿ ನೆರವೇರಿಸಿ ಕೊಡಲಿರುವ ವಿವಿಧ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮಗಳ ಭಾಷಣವನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಗುಜರಾತ್‌ನ ಧೋಲೇರಾ ಮತ್ತು ಸನಂದ್ ಹಾಗೂ ಅಸ್ಸಾಂನ ಮೋರಿಗಾಂವ್‌ನಲ್ಲಿ ಸೆಮಿಕಂಡಕ್ಟರ್‌ ಫ್ಯಾಕ್ಟರಿಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರದರ್ಶಿಸಲು ವ್ಯವಸ್ಥೆ ಮಾಡುವಂತೆ ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಇದನ್ನು “ಪ್ರಚಾರ ಕಾರ್ಯಕ್ರಮ” ಎಂದು ಕರೆದ ಕೆಲವು ಶಿಕ್ಷಣ ತಜ್ಞರು, ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದು 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಮತದಾರರನ್ನು ತಲುಪುವ  ಬಿಜೆಪಿಯ ಕೊನೆಯ ಪ್ರಯತ್ನದ ಭಾಗವಾಗಿದೆ ಎಂದು ಹೇಳಲಾಗಿದೆ.

ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಮೋದಿಯ ಚಿತ್ರವಿರುವ ‘ವಿಕಸಿತ್‌ ಭಾರತ್’ ಪೋಸ್ಟರ್‌ಗಳನ್ನು ಹಾಕುವಂತೆ ಶಿಕ್ಷಣ ಸಚಿವಾಲಯ ಸಂಸ್ಥೆಗಳಿಗೆ ಸೂಚಿಸಿದೆ. ಕಾರ್ಯಕ್ರಮದ ನಂತರ ತನ್ನ ನಿಯಂತ್ರಣದಲ್ಲಿರುವ ಸಂಸ್ಥೆಗಳು ತಮ್ಮ ಈ ಆದೇಶದ ಅನುಸರಣೆ ವರದಿಗಳನ್ನು ಕಳುಹಿಸಬೇಕೆಂದು ಸಚಿವಾಲಯ ಬಯಸುತ್ತದೆ ಎಂದು ಟೆಲಿಗ್ರಾಫ್ ವರದಿ ಉಲ್ಲೇಖಿಸಿದೆ. ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC) ರಾಜ್ಯ ಮಟ್ಟದ ವಿಶ್ವವಿದ್ಯಾನಿಲಯಗಳು ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳು ಸೇರಿದಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಈ ಬಗ್ಗೆ ಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಕುರಿತು ಸಂಸ್ಥೆಗಳ ಉಪಕುಲಪತಿಗಳಿಗೆ ಕಳುಹಿಸಲಾದ ಪತ್ರದ ಜೊತೆಗೆ ಕಾರ್ಯಕ್ರಮದ ಸ್ಥಳಗಳಲ್ಲಿ ಅಳವಡಿಸಬೇಕಾದ ಐದು ಪೋಸ್ಟರ್‌ಗಳ ವಿನ್ಯಾಸಗಳನ್ನು ಲಗತ್ತಿಸಲಾಗಿದೆ. ಪೋಸ್ಟರ್‌ಗಳಲ್ಲಿ ವಿಕಸಿತ್‌ ಭಾರತ್ ಎಂದು ಉಲ್ಲೇಖಿಸಲಾಗಿದೆ ಮತ್ತು ಸೆಮಿಕಂಡಕ್ಟರ್ ಪ್ಯಾಕಟರಿಗಳಿಗೆ ಮೋದಿ ಅಡಿಗಲ್ಲು ಹಾಕುತ್ತಿರುವ ಪೋಟೋಗಳು ಕೂಡ ಅದರಲ್ಲಿ ಕಂಡು ಬರುತ್ತಿದೆ. ಈವೆಂಟ್‌ಗೆ ಸಂಬಂಧಿಸಿದ ಪೋಸ್ಟರ್‌ಗಳನ್ನು ಲಗತ್ತಿಸಲಾಗಿದೆ. ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಪ್ರಚಾರ ಮಾಡಲು ಮತ್ತು ವಿಕಸಿತ್‌ ಭಾರತ್‌ನ ದೃಷ್ಟಿಗೆ ಕಾರಣವಾಗುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರನ್ನು ಪ್ರೋತ್ಸಾಹಿಸಲು ವಿನಂತಿಸಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಈ ಪ್ರಯತ್ನದ ಪ್ರಮುಖ ಪಾಲುದಾರರಾಗಿದ್ದಾರೆ, ಆದ್ದರಿಂದ, ಎಲ್ಲಾ ವಿಶ್ವವಿದ್ಯಾನಿಲಯಗಳು ಅಗತ್ಯ ವ್ಯವಸ್ಥೆಯನ್ನು ಮಾಡಬೇಕು ಮತ್ತು ಎಲ್ಲಾ ವಿದ್ಯಾರ್ಥಿಗಳು, ವಿಶೇಷವಾಗಿ STEM ಮತ್ತು ತಾಂತ್ರಿಕ ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಮಿರಾಂಡಾ ಹೌಸ್ ಕಾಲೇಜಿನ ಅಧ್ಯಾಪಕ ಸದಸ್ಯ ಅಭಾ ದೇವ್ ಹಬೀಬ್, ಇದು ಶಿಕ್ಷಣ ಸಂಸ್ಥೆಗಳ ಮೇಲಿನ ಸರಕಾರದ ಹಸ್ತಕ್ಷೇಪವಾಗಿದೆ. ಇದು ಸಂಪೂರ್ಣವಾಗಿ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ರಮವಾಗಿದೆ. ಸಂಶೋಧಕರು ಮತ್ತು ಅಧ್ಯಾಪಕರು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸಬೇಕು. ಆದರೆ ಅವರು ಪ್ರಚಾರ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ದೆಹಲಿ ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ ಸದಸ್ಯ ಅಶೋಕ್ ಅಗರವಾಲ್, ನಿರ್ದೇಶನಗಳನ್ನು ರಾಜಕೀಯ ಪ್ರೇರಿತ ಮತ್ತು ತಪ್ಪು ಎಂದು ಕರೆದಿದ್ದಾರೆ.  ವಿಶ್ವವಿದ್ಯಾನಿಲಯಗಳು ಸ್ವಾಯತ್ತವಾಗಿವೆ. ಅಂತಹ ನಿರ್ದೇಶನಗಳನ್ನು ನಿರ್ಲಕ್ಷಿಸುವ ಶಕ್ತಿ ಅವರಿಗೆ ಇದೆ. ಆದರೆ ಸರ್ಕಾರವು ಅವರನ್ನು ಬಲಿಪಶು ಮಾಡುವುದರಿಂದ ಸಂಸ್ಥೆಗಳು ನಿರ್ಲಕ್ಷಿಸುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ, ಯುಜಿಸಿ ದೇಶದ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಮೋದಿ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (BBBP) ಲಾಂಛನವನ್ನು ಆವರಣದಲ್ಲಿ ಸ್ಥಾಪಿಸುವಂತೆ ಕೇಳಿಕೊಂಡಿತ್ತು. ಮೋದಿ ಪೋಟೋ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೇಳಿಕೊಂಡಿತ್ತು. ಇದಕ್ಕೆ ಪ್ರತಿಪಕ್ಷಗಳು ತೀವ್ರವಾದ ವಿರೋಧನ್ನು ವ್ಯಕ್ತಪಡಿಸಿದ್ದವು.

ಇದನ್ನು ಓದಿ: CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...