HomeUncategorizedಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

ಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

- Advertisement -
- Advertisement -

ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಅಧ್ಯಾಪಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಯುಜಿಸಿ ಕರಡು ನಿಯಮಗಳ ಕುರಿತು ರಾಜಕೀಯ ಗದ್ದಲದ ನಡುವೆ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಗುರುವಾರ ವಿವಾದಾತ್ಮಕ ಕರಡು ನಿಯಮದ ಕುರಿತು ಸಾರ್ವಜನಿಕ ಪ್ರತಿಕ್ರಿಯೆಯನ್ನು ಸ್ವೀಕರಿಸುವ ಗಡುವನ್ನು ಫೆಬ್ರವರಿ 28 ರವರೆಗೆ ವಿಸ್ತರಣೆ ಮಾಡುವುದಾಗಿ ಪ್ರಕಟಿಸಿದೆ. ಯುಜಿಸಿ ಕರಡು

ಆರು ಬಿಜೆಪಿಯೇತರ ಆಡಳಿತದ ರಾಜ್ಯಗಳು ಕರಡು ನೇಮಕಾತಿ ಮತ್ತು ಬಡ್ತಿ ಮಾನದಂಡಗಳನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಕರಡು ನಿಯಮಗಳನ್ನು ತೀವ್ರವಾಗಿ ವಿರೋಧಿಸಿದ್ದು, ತಮಿಳುನಾಡು ಆಡಳಿತರೂಢ ಡಿಎಂಕೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು.

ಡಿಎಂಕೆ ವಿದ್ಯಾರ್ಥಿ ವಿಭಾಗದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆ”ಯನ್ನು ದೇಶದ ಮೇಲೆ ಹೇರುವ ತನ್ನ ಕಲ್ಪನೆಯನ್ನು ಸಾಧಿಸಲು ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಮುಂದಿಟ್ಟು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕೆಲವು ರಾಜಕೀಯ ನಾಯಕರು ತಮ್ಮ ಹಳೆಯ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ಕಾಲ್ಪನಿಕ ಬೆದರಿಕೆಗಳಾಗಿ ತಿರುಚುತ್ತಿದ್ದಾರೆ. ಇದು ದುರದೃಷ್ಟಕರ ಮತ್ತು ಕಳವಳಕಾರಿಯಾಗಿದೆ” ಎಂದು ಹೇಳಿದ್ದಾರೆ.

“ಕರಡು ಯುಜಿಸಿ ನಿಯಮಗಳು 2025 ರ ಕುರಿತು ಪ್ರತಿಕ್ರಿಯೆ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲು ಪಾಲುದಾರರು(Stakeholders) ವಿನಂತಿಗಳನ್ನು ಮಾಡಿದ್ದು, ಆದ್ದರಿಂದ ಯುಜಿಸಿ ಈಗ ಕೊನೆಯ ದಿನಾಂಕವನ್ನು ಫೆಬ್ರವರಿ 28, 2025 ರವರೆಗೆ ವಿಸ್ತರಿಸಲು ನಿರ್ಧರಿಸಿದೆ” ಎಂದು ಯುಜಿಸಿ ಕಾರ್ಯದರ್ಶಿ ಪ್ರೊ. ಮನೀಶ್ ಆರ್ ಜೋಶಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕರಡು ನಿಯಮಗಳ ಕುರಿತು ಪಾಲುದಾರರು 28/02/2025 ರವರೆಗೆ ಈ ಕೆಳಗಿನ ಇಮೇಲ್ ವಿಳಾಸಕ್ಕೆ ಪ್ರತಿಕ್ರಿಯೆಯನ್ನು ಸಲ್ಲಿಸಬಹುದು: [email protected].” ಎಂದು ಹೇಳಿದೆ. ಕರಡನ್ನು ಜನವರಿ 6, 2025 ರಂದು ಯುಜಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಯುಜಿಸಿ ಫೆಬ್ರವರಿ 5, 2025 ರವರೆಗೆ ಪಾಲುದಾರರಿಂದ ಪ್ರತಿಕ್ರಿಯೆಯನ್ನು ಕೋರಿದೆ.

ಕೇಂದ್ರ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ಪ್ರತಿಯೊಂದು ರಾಜ್ಯವು ತನ್ನದೇ ಆದ ಸಂಪ್ರದಾಯಗಳು, ಇತಿಹಾಸ ಮತ್ತು ಭಾಷೆಯನ್ನು ಹೊಂದಿದೆ. ಅದಕ್ಕಾಗಿಯೇ ಸಂವಿಧಾನದಲ್ಲಿ ಭಾರತವನ್ನು ‘ರಾಜ್ಯಗಳ ಒಕ್ಕೂಟ’ ಎಂದು ಕರೆಯಲಾಗುತ್ತದೆ ಎಂದು ನಾನು ಹೇಳುತ್ತಲೇ ಇರುತ್ತೇನೆ. ಅಂದರೆ ಈ ಎಲ್ಲಾ ಇತಿಹಾಸಗಳು, ಸಂಪ್ರದಾಯಗಳು ಮತ್ತು ಭಾಷೆಗಳು ಭಾರತವನ್ನು ರಾಜ್ಯಗಳ ಒಕ್ಕೂಟವನ್ನಾಗಿ ಮಾಡಲು ಒಟ್ಟಿಗೆ ಬರುತ್ತವೆ ಮತ್ತು ಆದ್ದರಿಂದ ನಾವು ಅದರ ಬಗ್ಗೆ ಯೋಚಿಸಬೇಕು.” ಎಂದು ಹೇಳಿದ್ದಾರೆ.

“ನಾವು ಎಲ್ಲಾ ಭಾಷೆಗಳು, ಎಲ್ಲಾ ಸಂಸ್ಕೃತಿಗಳು, ಎಲ್ಲಾ ಸಂಪ್ರದಾಯಗಳು, ಎಲ್ಲಾ ಇತಿಹಾಸಗಳನ್ನು ಗೌರವಿಸಬೇಕು ಮತ್ತು ಅವು ಎಲ್ಲಿಂದ ಬರುತ್ತವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಎಂಕೆ ವಿದ್ಯಾರ್ಥಿಗಳ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಹೊಸ ಶಿಕ್ಷಣ ನೀತಿಯ ವಿರುದ್ಧದ ಈ ಪ್ರತಿಭಟನೆಯನ್ನು ಸಮಾಜವಾದಿ ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಹೊಸ ಶಿಕ್ಷಣ ನೀತಿಯು ವಿಶ್ವವಿದ್ಯಾಲಯಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಪಿತೂರಿಯಾಗಿದೆ.” ಎಂದು ಹೇಳಿದ್ದಾರೆ.

“ನೀತಿಯು ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಸಿದುಕೊಳ್ಳುವ ಮತ್ತು ರಾಜಕಾರಣಿಗಳನ್ನು ಕೈಗಾರಿಕೋದ್ಯಮಿಗಳ ಸೇವಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ನಾವು ಈ ನೀತಿಯನ್ನು ಎಂದಿಗೂ ಬೆಂಬಲಿಸುವುದಿಲ್ಲ. ಅವರು ರಾಜ್ಯ ಸರ್ಕಾರಗಳ ಎಲ್ಲಾ ಅಧಿಕಾರಗಳನ್ನು ವಶಪಡಿಸಿಕೊಳ್ಳಲು ಬಯಸುತ್ತಾರೆ.” ಎಂದು ಹೇಳಿದ್ದಾರೆ.

ಗುರುವಾರ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ (ಎಲ್ಲ ವಿರೋಧ ಪಕ್ಷದ ಆಡಳಿತದ ರಾಜ್ಯಗಳು) ರಾಜ್ಯಗಳ ಆರು ಸಚಿವರು ಅಥವಾ ಅವರ ಪ್ರತಿನಿಧಿಗಳು ಯುಜಿಸಿ ಕರಡು ನಿಯಮಗಳ ಕುರಿತು 15 ಅಂಶಗಳ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಕರಡು ನಿಯಮಗಳ ಪ್ರಕಾರ, ಸಾರ್ವಜನಿಕ ಆಡಳಿತ, ಸಾರ್ವಜನಿಕ ನೀತಿ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಉದ್ಯಮ ತಜ್ಞರು ಮತ್ತು ಹಿರಿಯ ವೃತ್ತಿಪರರನ್ನು ಉಪಕುಲಪತಿಗಳನ್ನಾಗಿ ನೇಮಕಮಾಡಬಹುದಾಗಿದೆ. ಕರಡು ಮಾನದಂಡಗಳು ಕುಲಪತಿಗಳು ಅಥವಾ ಸಂದರ್ಶಕರಿಗೆ ಉಪಕುಲಪತಿಗಳನ್ನು ನೇಮಿಸಲು ಮೂರು ಸದಸ್ಯರ ಹುಡುಕಾಟ ಮತ್ತು ಆಯ್ಕೆ ಸಮಿತಿಯನ್ನು ರಚಿಸುವ ಅಧಿಕಾರವನ್ನು ನೀಡಿವೆ.

ಹೊಸ ಮಾರ್ಗಸೂಚಿಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರನ್ನು ನೇಮಿಸಿಕೊಳ್ಳುವ ಮಾನದಂಡಗಳನ್ನು ಸಹ ತಿದ್ದುಪಡಿ ಮಾಡುತ್ತವೆ. ಕನಿಷ್ಠ 55% ಅಂಕಗಳೊಂದಿಗೆ ಮಾಸ್ಟರ್ ಆಫ್ ಎಂಜಿನಿಯರಿಂಗ್ (M.E) ಮತ್ತು ಮಾಸ್ಟರ್ಸ್ ಆಫ್ ಟೆಕ್ನಾಲಜಿ (MTech) ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿರುವ ಜನರನ್ನು ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಗೆ ಅರ್ಹತೆ ಪಡೆಯದೆ ನೇರವಾಗಿ ಸಹಾಯಕ ಪ್ರಾಧ್ಯಾಪಕ ಮಟ್ಟಕ್ಕೆ ನೇಮಕ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂಓದಿ:  ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...