HomeUncategorizedಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

ಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

- Advertisement -
- Advertisement -

ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಅಧ್ಯಾಪಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಯುಜಿಸಿ ಕರಡು ನಿಯಮಗಳ ಕುರಿತು ರಾಜಕೀಯ ಗದ್ದಲದ ನಡುವೆ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಗುರುವಾರ ವಿವಾದಾತ್ಮಕ ಕರಡು ನಿಯಮದ ಕುರಿತು ಸಾರ್ವಜನಿಕ ಪ್ರತಿಕ್ರಿಯೆಯನ್ನು ಸ್ವೀಕರಿಸುವ ಗಡುವನ್ನು ಫೆಬ್ರವರಿ 28 ರವರೆಗೆ ವಿಸ್ತರಣೆ ಮಾಡುವುದಾಗಿ ಪ್ರಕಟಿಸಿದೆ. ಯುಜಿಸಿ ಕರಡು

ಆರು ಬಿಜೆಪಿಯೇತರ ಆಡಳಿತದ ರಾಜ್ಯಗಳು ಕರಡು ನೇಮಕಾತಿ ಮತ್ತು ಬಡ್ತಿ ಮಾನದಂಡಗಳನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಕರಡು ನಿಯಮಗಳನ್ನು ತೀವ್ರವಾಗಿ ವಿರೋಧಿಸಿದ್ದು, ತಮಿಳುನಾಡು ಆಡಳಿತರೂಢ ಡಿಎಂಕೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು.

ಡಿಎಂಕೆ ವಿದ್ಯಾರ್ಥಿ ವಿಭಾಗದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆ”ಯನ್ನು ದೇಶದ ಮೇಲೆ ಹೇರುವ ತನ್ನ ಕಲ್ಪನೆಯನ್ನು ಸಾಧಿಸಲು ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಮುಂದಿಟ್ಟು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕೆಲವು ರಾಜಕೀಯ ನಾಯಕರು ತಮ್ಮ ಹಳೆಯ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ಕಾಲ್ಪನಿಕ ಬೆದರಿಕೆಗಳಾಗಿ ತಿರುಚುತ್ತಿದ್ದಾರೆ. ಇದು ದುರದೃಷ್ಟಕರ ಮತ್ತು ಕಳವಳಕಾರಿಯಾಗಿದೆ” ಎಂದು ಹೇಳಿದ್ದಾರೆ.

“ಕರಡು ಯುಜಿಸಿ ನಿಯಮಗಳು 2025 ರ ಕುರಿತು ಪ್ರತಿಕ್ರಿಯೆ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲು ಪಾಲುದಾರರು(Stakeholders) ವಿನಂತಿಗಳನ್ನು ಮಾಡಿದ್ದು, ಆದ್ದರಿಂದ ಯುಜಿಸಿ ಈಗ ಕೊನೆಯ ದಿನಾಂಕವನ್ನು ಫೆಬ್ರವರಿ 28, 2025 ರವರೆಗೆ ವಿಸ್ತರಿಸಲು ನಿರ್ಧರಿಸಿದೆ” ಎಂದು ಯುಜಿಸಿ ಕಾರ್ಯದರ್ಶಿ ಪ್ರೊ. ಮನೀಶ್ ಆರ್ ಜೋಶಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕರಡು ನಿಯಮಗಳ ಕುರಿತು ಪಾಲುದಾರರು 28/02/2025 ರವರೆಗೆ ಈ ಕೆಳಗಿನ ಇಮೇಲ್ ವಿಳಾಸಕ್ಕೆ ಪ್ರತಿಕ್ರಿಯೆಯನ್ನು ಸಲ್ಲಿಸಬಹುದು: [email protected].” ಎಂದು ಹೇಳಿದೆ. ಕರಡನ್ನು ಜನವರಿ 6, 2025 ರಂದು ಯುಜಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಯುಜಿಸಿ ಫೆಬ್ರವರಿ 5, 2025 ರವರೆಗೆ ಪಾಲುದಾರರಿಂದ ಪ್ರತಿಕ್ರಿಯೆಯನ್ನು ಕೋರಿದೆ.

ಕೇಂದ್ರ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ಪ್ರತಿಯೊಂದು ರಾಜ್ಯವು ತನ್ನದೇ ಆದ ಸಂಪ್ರದಾಯಗಳು, ಇತಿಹಾಸ ಮತ್ತು ಭಾಷೆಯನ್ನು ಹೊಂದಿದೆ. ಅದಕ್ಕಾಗಿಯೇ ಸಂವಿಧಾನದಲ್ಲಿ ಭಾರತವನ್ನು ‘ರಾಜ್ಯಗಳ ಒಕ್ಕೂಟ’ ಎಂದು ಕರೆಯಲಾಗುತ್ತದೆ ಎಂದು ನಾನು ಹೇಳುತ್ತಲೇ ಇರುತ್ತೇನೆ. ಅಂದರೆ ಈ ಎಲ್ಲಾ ಇತಿಹಾಸಗಳು, ಸಂಪ್ರದಾಯಗಳು ಮತ್ತು ಭಾಷೆಗಳು ಭಾರತವನ್ನು ರಾಜ್ಯಗಳ ಒಕ್ಕೂಟವನ್ನಾಗಿ ಮಾಡಲು ಒಟ್ಟಿಗೆ ಬರುತ್ತವೆ ಮತ್ತು ಆದ್ದರಿಂದ ನಾವು ಅದರ ಬಗ್ಗೆ ಯೋಚಿಸಬೇಕು.” ಎಂದು ಹೇಳಿದ್ದಾರೆ.

“ನಾವು ಎಲ್ಲಾ ಭಾಷೆಗಳು, ಎಲ್ಲಾ ಸಂಸ್ಕೃತಿಗಳು, ಎಲ್ಲಾ ಸಂಪ್ರದಾಯಗಳು, ಎಲ್ಲಾ ಇತಿಹಾಸಗಳನ್ನು ಗೌರವಿಸಬೇಕು ಮತ್ತು ಅವು ಎಲ್ಲಿಂದ ಬರುತ್ತವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಎಂಕೆ ವಿದ್ಯಾರ್ಥಿಗಳ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಹೊಸ ಶಿಕ್ಷಣ ನೀತಿಯ ವಿರುದ್ಧದ ಈ ಪ್ರತಿಭಟನೆಯನ್ನು ಸಮಾಜವಾದಿ ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಹೊಸ ಶಿಕ್ಷಣ ನೀತಿಯು ವಿಶ್ವವಿದ್ಯಾಲಯಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಪಿತೂರಿಯಾಗಿದೆ.” ಎಂದು ಹೇಳಿದ್ದಾರೆ.

“ನೀತಿಯು ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಸಿದುಕೊಳ್ಳುವ ಮತ್ತು ರಾಜಕಾರಣಿಗಳನ್ನು ಕೈಗಾರಿಕೋದ್ಯಮಿಗಳ ಸೇವಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ನಾವು ಈ ನೀತಿಯನ್ನು ಎಂದಿಗೂ ಬೆಂಬಲಿಸುವುದಿಲ್ಲ. ಅವರು ರಾಜ್ಯ ಸರ್ಕಾರಗಳ ಎಲ್ಲಾ ಅಧಿಕಾರಗಳನ್ನು ವಶಪಡಿಸಿಕೊಳ್ಳಲು ಬಯಸುತ್ತಾರೆ.” ಎಂದು ಹೇಳಿದ್ದಾರೆ.

ಗುರುವಾರ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ (ಎಲ್ಲ ವಿರೋಧ ಪಕ್ಷದ ಆಡಳಿತದ ರಾಜ್ಯಗಳು) ರಾಜ್ಯಗಳ ಆರು ಸಚಿವರು ಅಥವಾ ಅವರ ಪ್ರತಿನಿಧಿಗಳು ಯುಜಿಸಿ ಕರಡು ನಿಯಮಗಳ ಕುರಿತು 15 ಅಂಶಗಳ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಕರಡು ನಿಯಮಗಳ ಪ್ರಕಾರ, ಸಾರ್ವಜನಿಕ ಆಡಳಿತ, ಸಾರ್ವಜನಿಕ ನೀತಿ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಉದ್ಯಮ ತಜ್ಞರು ಮತ್ತು ಹಿರಿಯ ವೃತ್ತಿಪರರನ್ನು ಉಪಕುಲಪತಿಗಳನ್ನಾಗಿ ನೇಮಕಮಾಡಬಹುದಾಗಿದೆ. ಕರಡು ಮಾನದಂಡಗಳು ಕುಲಪತಿಗಳು ಅಥವಾ ಸಂದರ್ಶಕರಿಗೆ ಉಪಕುಲಪತಿಗಳನ್ನು ನೇಮಿಸಲು ಮೂರು ಸದಸ್ಯರ ಹುಡುಕಾಟ ಮತ್ತು ಆಯ್ಕೆ ಸಮಿತಿಯನ್ನು ರಚಿಸುವ ಅಧಿಕಾರವನ್ನು ನೀಡಿವೆ.

ಹೊಸ ಮಾರ್ಗಸೂಚಿಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರನ್ನು ನೇಮಿಸಿಕೊಳ್ಳುವ ಮಾನದಂಡಗಳನ್ನು ಸಹ ತಿದ್ದುಪಡಿ ಮಾಡುತ್ತವೆ. ಕನಿಷ್ಠ 55% ಅಂಕಗಳೊಂದಿಗೆ ಮಾಸ್ಟರ್ ಆಫ್ ಎಂಜಿನಿಯರಿಂಗ್ (M.E) ಮತ್ತು ಮಾಸ್ಟರ್ಸ್ ಆಫ್ ಟೆಕ್ನಾಲಜಿ (MTech) ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿರುವ ಜನರನ್ನು ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಗೆ ಅರ್ಹತೆ ಪಡೆಯದೆ ನೇರವಾಗಿ ಸಹಾಯಕ ಪ್ರಾಧ್ಯಾಪಕ ಮಟ್ಟಕ್ಕೆ ನೇಮಕ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂಓದಿ:  ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...