HomeUncategorizedಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

ಯುಜಿಸಿ ಕರಡು ನಿಯಮಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆ; ಪ್ರತಿಕ್ರಿಯೆ ನೀಡಲು ಗಡುವು ವಿಸ್ತರಣೆ

- Advertisement -
- Advertisement -

ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಲ್ಲಿ ಅಧ್ಯಾಪಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಯುಜಿಸಿ ಕರಡು ನಿಯಮಗಳ ಕುರಿತು ರಾಜಕೀಯ ಗದ್ದಲದ ನಡುವೆ, ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಗುರುವಾರ ವಿವಾದಾತ್ಮಕ ಕರಡು ನಿಯಮದ ಕುರಿತು ಸಾರ್ವಜನಿಕ ಪ್ರತಿಕ್ರಿಯೆಯನ್ನು ಸ್ವೀಕರಿಸುವ ಗಡುವನ್ನು ಫೆಬ್ರವರಿ 28 ರವರೆಗೆ ವಿಸ್ತರಣೆ ಮಾಡುವುದಾಗಿ ಪ್ರಕಟಿಸಿದೆ. ಯುಜಿಸಿ ಕರಡು

ಆರು ಬಿಜೆಪಿಯೇತರ ಆಡಳಿತದ ರಾಜ್ಯಗಳು ಕರಡು ನೇಮಕಾತಿ ಮತ್ತು ಬಡ್ತಿ ಮಾನದಂಡಗಳನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಕರಡು ನಿಯಮಗಳನ್ನು ತೀವ್ರವಾಗಿ ವಿರೋಧಿಸಿದ್ದು, ತಮಿಳುನಾಡು ಆಡಳಿತರೂಢ ಡಿಎಂಕೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಯನ್ನು ಆಯೋಜಿಸಿತ್ತು.

ಡಿಎಂಕೆ ವಿದ್ಯಾರ್ಥಿ ವಿಭಾಗದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಒಂದು ಇತಿಹಾಸ, ಒಂದು ಸಂಪ್ರದಾಯ, ಒಂದು ಭಾಷೆ”ಯನ್ನು ದೇಶದ ಮೇಲೆ ಹೇರುವ ತನ್ನ ಕಲ್ಪನೆಯನ್ನು ಸಾಧಿಸಲು ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಮುಂದಿಟ್ಟು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕೆಲವು ರಾಜಕೀಯ ನಾಯಕರು ತಮ್ಮ ಹಳೆಯ ರಾಜಕೀಯ ನಿರೂಪಣೆಗಳನ್ನು ಉಳಿಸಿಕೊಳ್ಳಲು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ಕಾಲ್ಪನಿಕ ಬೆದರಿಕೆಗಳಾಗಿ ತಿರುಚುತ್ತಿದ್ದಾರೆ. ಇದು ದುರದೃಷ್ಟಕರ ಮತ್ತು ಕಳವಳಕಾರಿಯಾಗಿದೆ” ಎಂದು ಹೇಳಿದ್ದಾರೆ.

“ಕರಡು ಯುಜಿಸಿ ನಿಯಮಗಳು 2025 ರ ಕುರಿತು ಪ್ರತಿಕ್ರಿಯೆ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲು ಪಾಲುದಾರರು(Stakeholders) ವಿನಂತಿಗಳನ್ನು ಮಾಡಿದ್ದು, ಆದ್ದರಿಂದ ಯುಜಿಸಿ ಈಗ ಕೊನೆಯ ದಿನಾಂಕವನ್ನು ಫೆಬ್ರವರಿ 28, 2025 ರವರೆಗೆ ವಿಸ್ತರಿಸಲು ನಿರ್ಧರಿಸಿದೆ” ಎಂದು ಯುಜಿಸಿ ಕಾರ್ಯದರ್ಶಿ ಪ್ರೊ. ಮನೀಶ್ ಆರ್ ಜೋಶಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಕರಡು ನಿಯಮಗಳ ಕುರಿತು ಪಾಲುದಾರರು 28/02/2025 ರವರೆಗೆ ಈ ಕೆಳಗಿನ ಇಮೇಲ್ ವಿಳಾಸಕ್ಕೆ ಪ್ರತಿಕ್ರಿಯೆಯನ್ನು ಸಲ್ಲಿಸಬಹುದು: [email protected].” ಎಂದು ಹೇಳಿದೆ. ಕರಡನ್ನು ಜನವರಿ 6, 2025 ರಂದು ಯುಜಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಯುಜಿಸಿ ಫೆಬ್ರವರಿ 5, 2025 ರವರೆಗೆ ಪಾಲುದಾರರಿಂದ ಪ್ರತಿಕ್ರಿಯೆಯನ್ನು ಕೋರಿದೆ.

ಕೇಂದ್ರ ಸರ್ಕಾರದ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ಪ್ರತಿಯೊಂದು ರಾಜ್ಯವು ತನ್ನದೇ ಆದ ಸಂಪ್ರದಾಯಗಳು, ಇತಿಹಾಸ ಮತ್ತು ಭಾಷೆಯನ್ನು ಹೊಂದಿದೆ. ಅದಕ್ಕಾಗಿಯೇ ಸಂವಿಧಾನದಲ್ಲಿ ಭಾರತವನ್ನು ‘ರಾಜ್ಯಗಳ ಒಕ್ಕೂಟ’ ಎಂದು ಕರೆಯಲಾಗುತ್ತದೆ ಎಂದು ನಾನು ಹೇಳುತ್ತಲೇ ಇರುತ್ತೇನೆ. ಅಂದರೆ ಈ ಎಲ್ಲಾ ಇತಿಹಾಸಗಳು, ಸಂಪ್ರದಾಯಗಳು ಮತ್ತು ಭಾಷೆಗಳು ಭಾರತವನ್ನು ರಾಜ್ಯಗಳ ಒಕ್ಕೂಟವನ್ನಾಗಿ ಮಾಡಲು ಒಟ್ಟಿಗೆ ಬರುತ್ತವೆ ಮತ್ತು ಆದ್ದರಿಂದ ನಾವು ಅದರ ಬಗ್ಗೆ ಯೋಚಿಸಬೇಕು.” ಎಂದು ಹೇಳಿದ್ದಾರೆ.

“ನಾವು ಎಲ್ಲಾ ಭಾಷೆಗಳು, ಎಲ್ಲಾ ಸಂಸ್ಕೃತಿಗಳು, ಎಲ್ಲಾ ಸಂಪ್ರದಾಯಗಳು, ಎಲ್ಲಾ ಇತಿಹಾಸಗಳನ್ನು ಗೌರವಿಸಬೇಕು ಮತ್ತು ಅವು ಎಲ್ಲಿಂದ ಬರುತ್ತವೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಡಿಎಂಕೆ ವಿದ್ಯಾರ್ಥಿಗಳ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ಕೇಂದ್ರ ಸರ್ಕಾರವು ಪರಿಚಯಿಸುತ್ತಿರುವ ಹೊಸ ಶಿಕ್ಷಣ ನೀತಿಯ ವಿರುದ್ಧದ ಈ ಪ್ರತಿಭಟನೆಯನ್ನು ಸಮಾಜವಾದಿ ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಹೊಸ ಶಿಕ್ಷಣ ನೀತಿಯು ವಿಶ್ವವಿದ್ಯಾಲಯಗಳನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಪಿತೂರಿಯಾಗಿದೆ.” ಎಂದು ಹೇಳಿದ್ದಾರೆ.

“ನೀತಿಯು ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಸಿದುಕೊಳ್ಳುವ ಮತ್ತು ರಾಜಕಾರಣಿಗಳನ್ನು ಕೈಗಾರಿಕೋದ್ಯಮಿಗಳ ಸೇವಕರನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ನಾವು ಈ ನೀತಿಯನ್ನು ಎಂದಿಗೂ ಬೆಂಬಲಿಸುವುದಿಲ್ಲ. ಅವರು ರಾಜ್ಯ ಸರ್ಕಾರಗಳ ಎಲ್ಲಾ ಅಧಿಕಾರಗಳನ್ನು ವಶಪಡಿಸಿಕೊಳ್ಳಲು ಬಯಸುತ್ತಾರೆ.” ಎಂದು ಹೇಳಿದ್ದಾರೆ.

ಗುರುವಾರ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್ (ಎಲ್ಲ ವಿರೋಧ ಪಕ್ಷದ ಆಡಳಿತದ ರಾಜ್ಯಗಳು) ರಾಜ್ಯಗಳ ಆರು ಸಚಿವರು ಅಥವಾ ಅವರ ಪ್ರತಿನಿಧಿಗಳು ಯುಜಿಸಿ ಕರಡು ನಿಯಮಗಳ ಕುರಿತು 15 ಅಂಶಗಳ ನಿರ್ಣಯವನ್ನು ಅಂಗೀಕರಿಸಿದ್ದಾರೆ.

ಕರಡು ನಿಯಮಗಳ ಪ್ರಕಾರ, ಸಾರ್ವಜನಿಕ ಆಡಳಿತ, ಸಾರ್ವಜನಿಕ ನೀತಿ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಉದ್ಯಮ ತಜ್ಞರು ಮತ್ತು ಹಿರಿಯ ವೃತ್ತಿಪರರನ್ನು ಉಪಕುಲಪತಿಗಳನ್ನಾಗಿ ನೇಮಕಮಾಡಬಹುದಾಗಿದೆ. ಕರಡು ಮಾನದಂಡಗಳು ಕುಲಪತಿಗಳು ಅಥವಾ ಸಂದರ್ಶಕರಿಗೆ ಉಪಕುಲಪತಿಗಳನ್ನು ನೇಮಿಸಲು ಮೂರು ಸದಸ್ಯರ ಹುಡುಕಾಟ ಮತ್ತು ಆಯ್ಕೆ ಸಮಿತಿಯನ್ನು ರಚಿಸುವ ಅಧಿಕಾರವನ್ನು ನೀಡಿವೆ.

ಹೊಸ ಮಾರ್ಗಸೂಚಿಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಪಕರನ್ನು ನೇಮಿಸಿಕೊಳ್ಳುವ ಮಾನದಂಡಗಳನ್ನು ಸಹ ತಿದ್ದುಪಡಿ ಮಾಡುತ್ತವೆ. ಕನಿಷ್ಠ 55% ಅಂಕಗಳೊಂದಿಗೆ ಮಾಸ್ಟರ್ ಆಫ್ ಎಂಜಿನಿಯರಿಂಗ್ (M.E) ಮತ್ತು ಮಾಸ್ಟರ್ಸ್ ಆಫ್ ಟೆಕ್ನಾಲಜಿ (MTech) ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಹೊಂದಿರುವ ಜನರನ್ನು ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET) ಗೆ ಅರ್ಹತೆ ಪಡೆಯದೆ ನೇರವಾಗಿ ಸಹಾಯಕ ಪ್ರಾಧ್ಯಾಪಕ ಮಟ್ಟಕ್ಕೆ ನೇಮಕ ಮಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂಓದಿ:  ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...