Homeಮುಖಪುಟಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

- Advertisement -
- Advertisement -

ಮಂಗಳವಾರವಷ್ಟೇ (ಜೂನ್ 18) ನಡೆದಿದ್ದ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ರದ್ದುಪಡಿಸಿ, ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿಗಳು ಲಭಿಸಿರುವ ಕಾರಣ ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಿಕ್ಷಣ ಸಚಿವಾಲಯ ಬುಧವಾರ ಆದೇಶಿಸಿದೆ.

ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಇದರ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವ ನಡುವೆ, ಎನ್‌ಟಿಎ ನಡೆಸಿದ ನೆಟ್ ಪರೀಕ್ಷೆಯನ್ನೂ ರದ್ದುಗೊಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಒಂದಂಶವೂ ತಪ್ಪು ನಡೆಯಬಾರದು ಎಂದು ಎನ್‌ಟಿಎ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಈ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ನೆಟ್ ಪರೀಕ್ಷೆಯಲ್ಲಿ ಈ ಬಾರಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಪೆನ್‌ ಮತ್ತು ಪೇಪರ್ ಬಳಕೆಯ ಒಎಂಆರ್‌ ವಿಧಾನದಲ್ಲಿ ಒಂದೇ ದಿನದಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ 11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪಾರಧಗಳ ಸಮನ್ವಯ ಕೇಂದ್ರದ (ಐ4ಸಿ) ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಮಾಹಿತಿ ನೀಡಿರುವ ಹಿನ್ನೆಲೆ ಪರೀಕ್ಷೆ ರದ್ದುಪಡಿಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವ ವಿದ್ಯಾನಿಯಲಗಳು ಮತ್ತು ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಜೂನಿಯರ್ ರಿಸರ್ಚ್‌ ಫೆಲೋಶಿಫ್‌ಗೆ (ಜೆಆರ್‌ಎಫ್‌) ಹಾಗೂ ಪಿಹೆಚ್‌ಡಿ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ನೆಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ : ನೀಟ್ ಮರು ಮೌಲ್ಯಮಾಪನಕ್ಕೆ ಮುಂದಾದ ಎನ್‌ಟಿಎ; ಅಂಕ ಕಳೆದುಕೊಳ್ಳುವ 6 ಟಾಪರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...