Homeಮುಖಪುಟಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

- Advertisement -
- Advertisement -

ಮಂಗಳವಾರವಷ್ಟೇ (ಜೂನ್ 18) ನಡೆದಿದ್ದ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ರದ್ದುಪಡಿಸಿ, ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿಗಳು ಲಭಿಸಿರುವ ಕಾರಣ ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಿಕ್ಷಣ ಸಚಿವಾಲಯ ಬುಧವಾರ ಆದೇಶಿಸಿದೆ.

ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಇದರ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವ ನಡುವೆ, ಎನ್‌ಟಿಎ ನಡೆಸಿದ ನೆಟ್ ಪರೀಕ್ಷೆಯನ್ನೂ ರದ್ದುಗೊಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಒಂದಂಶವೂ ತಪ್ಪು ನಡೆಯಬಾರದು ಎಂದು ಎನ್‌ಟಿಎ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಈ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ನೆಟ್ ಪರೀಕ್ಷೆಯಲ್ಲಿ ಈ ಬಾರಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಪೆನ್‌ ಮತ್ತು ಪೇಪರ್ ಬಳಕೆಯ ಒಎಂಆರ್‌ ವಿಧಾನದಲ್ಲಿ ಒಂದೇ ದಿನದಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ 11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪಾರಧಗಳ ಸಮನ್ವಯ ಕೇಂದ್ರದ (ಐ4ಸಿ) ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಮಾಹಿತಿ ನೀಡಿರುವ ಹಿನ್ನೆಲೆ ಪರೀಕ್ಷೆ ರದ್ದುಪಡಿಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವ ವಿದ್ಯಾನಿಯಲಗಳು ಮತ್ತು ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಜೂನಿಯರ್ ರಿಸರ್ಚ್‌ ಫೆಲೋಶಿಫ್‌ಗೆ (ಜೆಆರ್‌ಎಫ್‌) ಹಾಗೂ ಪಿಹೆಚ್‌ಡಿ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ನೆಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ : ನೀಟ್ ಮರು ಮೌಲ್ಯಮಾಪನಕ್ಕೆ ಮುಂದಾದ ಎನ್‌ಟಿಎ; ಅಂಕ ಕಳೆದುಕೊಳ್ಳುವ 6 ಟಾಪರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...