Homeಮುಖಪುಟಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

- Advertisement -
- Advertisement -

ಮಂಗಳವಾರವಷ್ಟೇ (ಜೂನ್ 18) ನಡೆದಿದ್ದ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ರದ್ದುಪಡಿಸಿ, ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿಗಳು ಲಭಿಸಿರುವ ಕಾರಣ ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಿಕ್ಷಣ ಸಚಿವಾಲಯ ಬುಧವಾರ ಆದೇಶಿಸಿದೆ.

ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಇದರ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವ ನಡುವೆ, ಎನ್‌ಟಿಎ ನಡೆಸಿದ ನೆಟ್ ಪರೀಕ್ಷೆಯನ್ನೂ ರದ್ದುಗೊಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಒಂದಂಶವೂ ತಪ್ಪು ನಡೆಯಬಾರದು ಎಂದು ಎನ್‌ಟಿಎ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಈ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ನೆಟ್ ಪರೀಕ್ಷೆಯಲ್ಲಿ ಈ ಬಾರಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಪೆನ್‌ ಮತ್ತು ಪೇಪರ್ ಬಳಕೆಯ ಒಎಂಆರ್‌ ವಿಧಾನದಲ್ಲಿ ಒಂದೇ ದಿನದಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ 11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪಾರಧಗಳ ಸಮನ್ವಯ ಕೇಂದ್ರದ (ಐ4ಸಿ) ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಮಾಹಿತಿ ನೀಡಿರುವ ಹಿನ್ನೆಲೆ ಪರೀಕ್ಷೆ ರದ್ದುಪಡಿಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವ ವಿದ್ಯಾನಿಯಲಗಳು ಮತ್ತು ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಜೂನಿಯರ್ ರಿಸರ್ಚ್‌ ಫೆಲೋಶಿಫ್‌ಗೆ (ಜೆಆರ್‌ಎಫ್‌) ಹಾಗೂ ಪಿಹೆಚ್‌ಡಿ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ನೆಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ : ನೀಟ್ ಮರು ಮೌಲ್ಯಮಾಪನಕ್ಕೆ ಮುಂದಾದ ಎನ್‌ಟಿಎ; ಅಂಕ ಕಳೆದುಕೊಳ್ಳುವ 6 ಟಾಪರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...

ಉತ್ತರ ಪ್ರದೇಶ| ಕನ್ವಾರಿ ಯಾತ್ರಿಕರ ಹಲ್ಲೆಯಿಂದ ಮುಸ್ಲಿಂ ಯುವಕ ಸಾವು; ಐವರ ಬಂಧನ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಕನ್ವಾರಿ ಯಾತ್ರಿಕರ ಗುಂಪಿನಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಕನ್ವಾರಿಗಳನ್ನು ಬಂಧಿಸಲಾಗಿದೆ. ಬ್ರಿಜ್‌ಘಾಟ್ ಟೋಲ್ ಪ್ಲಾಜಾ ಬಳಿ ನಡೆದ ರಸ್ತೆ ಅಪಘಾತದ ನಂತರ ಮೊರಾದಾಬಾದ್...

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...