Homeಮುಖಪುಟಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

- Advertisement -
- Advertisement -

ಮಂಗಳವಾರವಷ್ಟೇ (ಜೂನ್ 18) ನಡೆದಿದ್ದ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ರದ್ದುಪಡಿಸಿ, ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿಗಳು ಲಭಿಸಿರುವ ಕಾರಣ ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಿಕ್ಷಣ ಸಚಿವಾಲಯ ಬುಧವಾರ ಆದೇಶಿಸಿದೆ.

ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಇದರ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವ ನಡುವೆ, ಎನ್‌ಟಿಎ ನಡೆಸಿದ ನೆಟ್ ಪರೀಕ್ಷೆಯನ್ನೂ ರದ್ದುಗೊಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಒಂದಂಶವೂ ತಪ್ಪು ನಡೆಯಬಾರದು ಎಂದು ಎನ್‌ಟಿಎ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಈ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ನೆಟ್ ಪರೀಕ್ಷೆಯಲ್ಲಿ ಈ ಬಾರಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಪೆನ್‌ ಮತ್ತು ಪೇಪರ್ ಬಳಕೆಯ ಒಎಂಆರ್‌ ವಿಧಾನದಲ್ಲಿ ಒಂದೇ ದಿನದಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ 11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪಾರಧಗಳ ಸಮನ್ವಯ ಕೇಂದ್ರದ (ಐ4ಸಿ) ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಮಾಹಿತಿ ನೀಡಿರುವ ಹಿನ್ನೆಲೆ ಪರೀಕ್ಷೆ ರದ್ದುಪಡಿಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವ ವಿದ್ಯಾನಿಯಲಗಳು ಮತ್ತು ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಜೂನಿಯರ್ ರಿಸರ್ಚ್‌ ಫೆಲೋಶಿಫ್‌ಗೆ (ಜೆಆರ್‌ಎಫ್‌) ಹಾಗೂ ಪಿಹೆಚ್‌ಡಿ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ನೆಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ : ನೀಟ್ ಮರು ಮೌಲ್ಯಮಾಪನಕ್ಕೆ ಮುಂದಾದ ಎನ್‌ಟಿಎ; ಅಂಕ ಕಳೆದುಕೊಳ್ಳುವ 6 ಟಾಪರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....