Homeಮುಖಪುಟಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

ಯುಜಿಸಿ ನೆಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಹಸ್ತಾಂತರ

- Advertisement -
- Advertisement -

ಮಂಗಳವಾರವಷ್ಟೇ (ಜೂನ್ 18) ನಡೆದಿದ್ದ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET)ರದ್ದುಪಡಿಸಿ, ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿಗಳು ಲಭಿಸಿರುವ ಕಾರಣ ಎನ್‌ಟಿಎ ನಡೆಸಿದ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಿಕ್ಷಣ ಸಚಿವಾಲಯ ಬುಧವಾರ ಆದೇಶಿಸಿದೆ.

ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಇದರ ಮಾಹಿತಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಶಿಕ್ಷಣ ಸಚಿವಾಲಯ ಹೇಳಿದೆ.

ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿರುವ ಅಕ್ರಮಗಳು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವ ನಡುವೆ, ಎನ್‌ಟಿಎ ನಡೆಸಿದ ನೆಟ್ ಪರೀಕ್ಷೆಯನ್ನೂ ರದ್ದುಗೊಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಒಂದಂಶವೂ ತಪ್ಪು ನಡೆಯಬಾರದು ಎಂದು ಎನ್‌ಟಿಎ ಹಾಗೂ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿತ್ತು. ಈ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್ ಪರೀಕ್ಷೆಯನ್ನು ರದ್ದುಪಡಿಸಿದೆ.

ನೆಟ್ ಪರೀಕ್ಷೆಯಲ್ಲಿ ಈ ಬಾರಿ ಹೊಸ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಪೆನ್‌ ಮತ್ತು ಪೇಪರ್ ಬಳಕೆಯ ಒಎಂಆರ್‌ ವಿಧಾನದಲ್ಲಿ ಒಂದೇ ದಿನದಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ದೇಶದಾದ್ಯಂತ 11 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪಾರಧಗಳ ಸಮನ್ವಯ ಕೇಂದ್ರದ (ಐ4ಸಿ) ನ್ಯಾಷನಲ್ ಸೈಬರ್ ಕ್ರೈಂ ಥ್ರೆಟ್ ಅನಾಲಿಟಿಕ್ಸ್ ಯೂನಿಟ್ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಮಾಹಿತಿ ನೀಡಿರುವ ಹಿನ್ನೆಲೆ ಪರೀಕ್ಷೆ ರದ್ದುಪಡಿಲಾಗಿದೆ ಎಂದು ತಿಳಿದು ಬಂದಿದೆ.

ವಿಶ್ವ ವಿದ್ಯಾನಿಯಲಗಳು ಮತ್ತು ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆಗಳು, ಜೂನಿಯರ್ ರಿಸರ್ಚ್‌ ಫೆಲೋಶಿಫ್‌ಗೆ (ಜೆಆರ್‌ಎಫ್‌) ಹಾಗೂ ಪಿಹೆಚ್‌ಡಿ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ನೆಟ್ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ : ನೀಟ್ ಮರು ಮೌಲ್ಯಮಾಪನಕ್ಕೆ ಮುಂದಾದ ಎನ್‌ಟಿಎ; ಅಂಕ ಕಳೆದುಕೊಳ್ಳುವ 6 ಟಾಪರ್‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...