Homeಮುಖಪುಟಪದವಿ ಕೋರ್ಸ್‌ಗಳ ಭಾಗವಾಗಿ ವೇದ ಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ

ಪದವಿ ಕೋರ್ಸ್‌ಗಳ ಭಾಗವಾಗಿ ವೇದ ಗಣಿತ, ಜ್ಯೋತಿಷ್ಯ ಪರಿಚಯಿಸಲು ಮುಂದಾದ ಯುಜಿಸಿ

- Advertisement -
- Advertisement -

”ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಭಾರತದತ್ತ ಸೆಳೆಯಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (UGC) ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಆಧಾರದ ಮೇಲೆ ‘ವೇದ’ ಗಣಿತ, ಸಂಸ್ಕೃತ, ಯೋಗ, ಆಯುರ್ವೇದ, ಜ್ಯೋತಿಷ್ಯ, ಮುಂತಾದ ಕೋರ್ಸ್‌ಗಳನ್ನು ಪರಿಚಯಿಸಲು ಆದೇಶಿಸಿದೆ. ಎಲ್ಲಾ ವಿಶ್ವವಿದ್ಯಾನಿಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (HEIs) ಭಾರತೀಯ ನೀತಿಶಾಸ್ತ್ರ, ತತ್ವಶಾಸ್ತ್ರ, ಸಂಗೀತ, ನೃತ್ಯ ಮತ್ತು ಇತರ ಪ್ರಕಾರಗಳುನ್ನು ಬೋಧಿಸಲಾಗುತ್ತದೆ.

ಆದರೆ ಈ ವಿಷಯಗಳ ಜೊತೆಗೆ ಜ್ಯೋತಿಷ್ಯದಂತಹ ಕೆಲವು ವಿಷಯಗಳ ಆಯ್ಕೆಯು ಅಚ್ಚರಿ ಮೂಡಿಸಿದೆ.

ಮಾರ್ಗಸೂಚಿ:

ರಾಷ್ಟ್ರೀಯ ಶಿಕ್ಷಣ ನೀತಿಯ (NEP-2020) ಅನುಸಾರವಾಗಿ, ”ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯ ಪ್ರಚಾರಕ್ಕೆ ಒತ್ತು ನೀಡುತ್ತದೆ. UGC ಮೇಲಿನ ಕೋರ್ಸ್‌ಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಚಯಿಸಲು ಯೋಜಿಸುತ್ತಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

UGC ಈ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ ಮತ್ತು ಅಂತಹ ಕೋರ್ಸ್‌ಗಳನ್ನು ಪ್ರಾರಂಭಿಸಲು ಮಾರ್ಗಸೂಚಿಗಳ ಪ್ರಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಕೇಳಿದೆ.

ಆಚಾರ್ಯರೊಂದಿಗೆ ಪ್ರವಚನ, ಧಾರ್ಮಿಕ ಭಕ್ತರೊಂದಿಗೆ ಸಂಗಮ (ಸತ್ಸಂಗ), ಜಾನಪದ ಸಂಸ್ಕೃತಿಗಳಿಗೆ ಒಡ್ಡಿಕೊಳ್ಳುವುದು ಮತ್ತು ಕಾರ್ಯಕ್ರಮಗಳ ಭಾಗವಾಗಿ ಪ್ರಸಿದ್ಧ ಸ್ಥಳಗಳಿಗೆ ಭೇಟಿ ನೀಡುವುದನ್ನು ಇದು ಶಿಫಾರಸು ಮಾಡುತ್ತದೆ.

ಏಕೆ ಈ ಕೋರ್ಸ್‌ಗಳು?:

”ಭಾರತೀಯ ನಾಗರಿಕತೆಯು ಪ್ರಪಂಚದ ಅತ್ಯಂತ ಪ್ರಾಚೀನ ನಾಗರಿಕತೆಗಳಲ್ಲಿ ಒಂದಾಗಿದೆ ಮತ್ತು ಭಾರತೀಯರು ಪ್ರತಿಯೊಂದು ಕ್ಷೇತ್ರಕ್ಕೂ ಗಮನಾರ್ಹವಾದ ಕೊಡುಗೆಯನ್ನು ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯವಾಗಿದೆ. ಪ್ರಾಚೀನ ಕಾಲದ ಭಾರತೀಯ ವಿಶ್ವವಿದ್ಯಾನಿಲಯಗಳಾದ ತಕ್ಷಶಿಲಾ, ನಳಂದಾ, ವಿಕ್ರಮಶಿಲಾ, ವಲ್ಲಭಿ ಮುಂತಾದವುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಕಲಿಕೆಯ ಕೇಂದ್ರಗಳಾಗಿದ್ದವು, ಅಲ್ಲಿ ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ವಿವಿಧ ಜ್ಞಾನದ ಸ್ಟ್ರೀಮ್‌ಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಭೇಟಿ ನೀಡುತ್ತಿದ್ದರು. ಈಗ ಈ ಭಾರತೀಯ ಜ್ಞಾನ ವ್ಯವಸ್ಥೆ ಮತ್ತು ಸಾಂಸ್ಕೃತಿಕ ಪರಂಪರೆಯೊಂದಿಗೆ ಪ್ರಪಂಚದಾದ್ಯಂತದ ವಿವಿಧ ದೇಶಗಳ ಜನರನ್ನು ಸೆಳೆಯಲು ತ್ವರಿತ ಯೋಜನೆಯನ್ನು ರೂಪಿಸಲಾಗಿದೆ” ಎಂದು ಯುಜಿಸಿ ಹೇಳಿದೆ.

ವಿಷಯಗಳ ಆಯ್ಕೆ ಬಗ್ಗೆ ಟೀಕೆ

ಯುಜಿಸಿ ನೀಡುವ ಜ್ಯೋತಿಷ್ಯ ಸೇರಿದಂತೆ ಹಲವು ಕೋರ್ಸ್‌ಗಳನ್ನು ಶಿಕ್ಷಣ ತಜ್ಞ ಟೀಕೆ ಮಾಡಿದ್ದಾರೆ.

ದಿ ಹಿಂದೂ ಜೊತೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಮತ್ತು ಬರಹಗಾರ ಎಸ್.ಜಿ.ಸಿದ್ದರಾಮಯ್ಯ ಅವರು, ”ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಭಾರತೀಯ ಪರಂಪರೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಹೆಸರಿನಲ್ಲಿ ಕೇಂದ್ರ ಸರ್ಕಾರವು ಜಾತ್ಯತೀತ ಸಂವಿಧಾನದ ಆಶಯಕ್ಕೆ ವಿರುದ್ಧವಾದ ಅನೇಕ ವಿಚಾರಗಳನ್ನು ಹೇರುತ್ತಿದೆ” ಎಂದು ಕಿಡಿಕಾರಿದ್ದಾರೆ.

ಯಾವೆಲ್ಲ ಕೋರ್ಸ್‌ಗಳು ಇರಲಿವೆ?

ಭಾರತೀಯ ಸಂಸ್ಕೃತಿ, ಭಾರತೀಯ ನೀತಿಶಾಸ್ತ್ರ, ‘ವೇದ’ ಗಣಿತ, ಜ್ಯೋತಿಷ್ಯ, ಆಯುರ್ವೇದ, ಯೋಗ, ಭಾರತೀಯ ತತ್ವಶಾಸ್ತ್ರ, ಭಾರತೀಯ ಸಂಗೀತ, ಭಾರತೀಯ ನೃತ್ಯ, ಭಾರತೀಯ ತಾಳವಾದ್ಯ ಮತ್ತು ಗಾಯನ ಸಂಗೀತ, ಭಾರತದ ಪವಿತ್ರ ಭೌಗೋಳಿಕ ಪ್ರದೇಶಗಳು, ಭಾರತದ ಪುರಾತತ್ವ ಸ್ಥಳಗಳು, ಭಾರತೀಯ ಕಲೆಗಳು ಮತ್ತು ವಾಸ್ತುಶಿಲ್ಪ, ಸಾಂಸ್ಕೃತಿಕ ಪರಂಪರೆ ಭಾರತದ, ಭಾರತೀಯ ಜಾನಪದ, ಭಾರತೀಯ ವೇದಿಕೆ, ಭಾರತೀಯ ನಾಟಕ, ಸಂಸ್ಕೃತ ನಾಟಕ, ಭಾರತೀಯ ಶಾಸನ, ಭಾರತೀಯ ಹಸ್ತಪ್ರತಿ ವ್ಯವಸ್ಥೆ, ಭಾರತೀಯ ಲಿಪಿ, ಭಾರತೀಯ ಆಚರಣೆಗಳು, ಭಾರತೀಯ ಆಹಾರ ಮತ್ತು ಫ್ಯಾಷನ್, ಸಂಸ್ಕೃತ ಭಾಷೆ ಮತ್ತು ಸಾಹಿತ್ಯ, ಪ್ರಾಕೃತ, ಹಿಂದಿ, ಕನ್ನಡ ಮತ್ತು ಇತರ ಭಾರತೀಯ ಭಾಷೆ ಮತ್ತು ಸಾಹಿತ್ಯ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...