Homeಮುಖಪುಟಮೋದಿ ಚಿತ್ರವಿರುವ 'ಸೆಲ್ಫಿ ಪಾಯಿಂಟ್‌' ಸ್ಥಾಪಿಸಲು ವಿವಿಗಳಿಗೆ ಯುಜಿಸಿ ಪತ್ರ

ಮೋದಿ ಚಿತ್ರವಿರುವ ‘ಸೆಲ್ಫಿ ಪಾಯಿಂಟ್‌’ ಸ್ಥಾಪಿಸಲು ವಿವಿಗಳಿಗೆ ಯುಜಿಸಿ ಪತ್ರ

- Advertisement -
- Advertisement -

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) 2024ರ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲು ದೇಶಾದ್ಯಂತ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಪತ್ರ ಬರೆದಿದೆ ಎಂದು ದಿ ವೈರ್‌ ವರದಿ ಮಾಡಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕ ದತ್ತಾಜಿ ದಿದೋಲ್ಕರ್ ಅವರ ಜನ್ಮ ಶತಮಾನೋತ್ಸವ  ಆಚರಿಸಲು ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಒತ್ತಾಯಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಯುಜಿಸಿ ತನ್ನ ಪತ್ರದಲ್ಲಿ ಸೆಲ್ಪಿ ತಾಣಗಳನ್ನು ಸೃಷ್ಟಿಸಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಳ್ಳಲು ಮತ್ತು ಅವುಗಳನ್ನು ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಸಂದರ್ಶಕರನ್ನು ಉತ್ತೇಜಿಸುವಂತೆ ಆಗ್ರಹಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಲವಾರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ತಮಗೆ ಸಂಬಂಧವಿಲ್ಲದ ವ್ಯಕ್ತಿನಿಷ್ಠೆ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ ಎಂದು ಹೇಳಿದ್ದಾರೆ.

ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

ಯುಜಿಸಿಯ ನಿರ್ದೇಶನದ ಪ್ರಕಾರ, ಪ್ರತಿ ಸೆಲ್ಫಿ ಪಾಯಿಂಟ್‌ನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು. ಇದು ಶಿಕ್ಷಣದ ಅಂತರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಬಹುಭಾಷಾತೆಯಂತಹ ನಿರ್ದಿಷ್ಟ ವಿಷಯಕ್ಕೆ ಅನುಗುಣವಾಗಿ ರೂಪಿಸಲು ಆಗ್ರಹಿಸಲಾಗಿದೆ.

ಸರ್ಕಾರವು ಪ್ರತಿಯೊಂದು ಸಾಮಾನ್ಯ ಸಾಧನೆಯನ್ನು ಅದ್ಭುತವೆಂದು ಬಿಂಬಿಸುತ್ತಿದೆ ಮತ್ತು ಅದರ ಕ್ರೆಡಿಟ್‌  ಪ್ರಧಾನಿಗೆ ಸಲ್ಲುತ್ತದೆ. ಸರಕಾರ ಅಥವಾ ಯುಜಿಸಿ ಇಂತಹ ಪ್ರಚಾರವನ್ನು ಉತ್ತೇಜಿಸುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ಉನ್ನತ ಸಂಸ್ಥೆಯೊಂದರ ಅಧ್ಯಾಪಕರೋರ್ವರು ಹೇಳಿರುವ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿದೆ.

ಯುಜಿಸಿಯು ಇಂತಹ ಸುತ್ತೋಲೆಗಳನ್ನು ಹೊರಡಿಸುತ್ತಲೇ ಇರುತ್ತದೆ ಮತ್ತು ಅವುಗಳನ್ನು ನಿರ್ಲಕ್ಷಿಸಲು ಕ್ಯಾಂಪಸ್ ಆಡಳಿತಗಳು ಮುಕ್ತವಾಗಿವೆ ಎಂದು ಪ್ರಾಧ್ಯಾಪಕರೋರ್ವರು ಹೇಳಿದ್ದು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಇಂತಹ ಸಲಹೆಗಳನ್ನು ಕಡೆಗಣಿಸಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ನ್ಯಾಯಾಲಯದಲ್ಲಿ ಅಂಬೇಡ್ಕರ್‌ಗೂ ಮೊದಲು ಮನು ಪ್ರತಿಮೆ ಏಕೆ ಸ್ಥಾಪಿಸಲಾಯಿತು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...