Homeಮುಖಪುಟಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

ಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ರಚಿಸುವಂತೆ ಕಾಲೇಜುಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ನಿರ್ದೇಶನ ನೀಡಿತ್ತು. ಇದೀಗ ವ್ಯಾಪಕ ವಿರೋಧದ ಬೆನ್ನಲ್ಲೇ ಯುಜಿಸಿ ಸೂಚಿಸಿದ ಡಿಸೈನ್‌ಗಳನ್ನು ವಾಪಾಸ್ಸು ಪಡೆಯಲಾಗಿದೆ.

ಯುಜಿಸಿ ನಿರ್ದೇಶನವನ್ನು ಆರಾಧಾನ ಸಂಸ್ಕೃತಿ ಎಂದು ಹಲವರು ಹೇಳಿದರೆ,  2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮೋದಿಯ ಪ್ರಚಾರ ತಂತ್ರ ಇದು ಎಂದು ಕೆಲವರು ಟೀಕಿಸಿದ್ದರು. ಸೆಲ್ಫಿ ಪಾಯಿಂಟ್‌ಗಳ ಸ್ಥಾಪನೆ ಕುರಿತ ನಿರ್ದೇಶನ ಜಾರಿಯಲ್ಲಿರುವಾಗ ನಿರ್ದೇಶನಗಳಲ್ಲಿ ಡಿಸೈನ್‌ಗಳನ್ನು ಏಕೆ ಹಿಂತೆಗೆದುಕೊಳ್ಳಲಾಗುತ್ತಿದೆ ಎಂಬುದನ್ನು ಯುಜಿಸಿ ಸ್ಪಷ್ಟಪಡಿಸಿಲ್ಲ.

ಯುಜಿಸಿಯ ಹಿಂದಿನ ನಿರ್ದೇಶನವು ಪ್ರತಿ ಸೆಲ್ಫಿ ಪಾಯಿಂಟ್‌ಗಳನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು ಎಂದು ಹೇಳಿದೆ. ಇದು ಶಿಕ್ಷಣದ ಅಂತರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಭಾರತೀಯ ಜ್ಞಾನ ವ್ಯವಸ್ಥೆ, ಬಹುಭಾಷಾತೆ ಮತ್ತು ಸಂಶೋಧನೆ ವಿಷಯಗಳನ್ನು ಶಿಫಾರಸು ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಲವಾರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ತಮಗೆ ಸಂಬಂಧವಿಲ್ಲದ ವ್ಯಕ್ತಿನಿಷ್ಠೆ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ ಎಂದು ಹೇಳಿದ್ದರು.

ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿತ್ತು.

ಇದರ ಬೆನ್ನಲ್ಲೇ ಯಾವುದೇ ಶಿಕ್ಷಣ ಸಂಸ್ಥೆಗಳು ಸರ್ಕಾರದ ಕಾರ್ಯಸೂಚಿಯನ್ನು ಉತ್ತೇಜಿಸುವಲ್ಲಿ ಹಿಂದೆಂದೂ ತೊಡಗಿಸಿಕೊಂಡಿಲ್ಲ ಎಂದು  ಯುಜಿಸಿ ಮಾಜಿ ಕಾರ್ಯದರ್ಶಿಯೊಬ್ಬರು ಪತ್ರಿಕೆಗೆ ತಿಳಿಸಿದ್ದರು. ದುರದೃಷ್ಟವಶಾತ್ ಜಗದೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪ್ರಸ್ತುತ ಯುಜಿಸಿ ಸರ್ಕಾರಕ್ಕಾಗಿ ಬಹಿರಂಗವಾಗಿ ಪ್ರಚಾರ ಮಾಡುತ್ತಿದೆ. ಇದು ಯುಜಿಸಿಯ ಕೆಲಸವಲ್ಲ. ಎಲ್ಲಾ ಸರ್ಕಾರಿ ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ನಿಷ್ಪಕ್ಷಪಾತವಾಗಿರಬೇಕು ಎಂದು ನಿರೀಕ್ಷಿಸಲಾಗಿದೆ. ಆದರೆ ಯುಜಿಸಿ ಕ್ರಮೇಣ ಆಡಳಿತ ಪಕ್ಷದ ಒಂದು ವಿಭಾಗವಾಗುತ್ತಿದೆ. ಯುಜಿಸಿಯಲ್ಲಿ ಈ ಮೊದಲು ಒಮ್ಮತದಿಂದ ನಿರ್ಧಾರವನ್ನು ಕೈಗೊಳ್ಳಲಾಗುತ್ತಿತ್ತು. ಇದರೆ ಈಗ ಏಕಮುಖ ಸಂವಹನವಾಗಿದೆ ಮತ್ತು ಬೇರೆ ಯಾರಿಗೂ ಮಾತನಾಡಲು ಅವಕಾಶವಿಲ್ಲದಂತಿದೆ ಎಂದು ಮಾಜಿ ಯುಜಿಸಿ ಕಾರ್ಯದರ್ಶಿಯೋರ್ವರು ಹೇಳಿರುವ ಬಗ್ಗೆ ಟೆಲಿಗ್ರಾಫ್‌ ವರದಿ ಮಾಡಿದೆ.

ದೆಹಲಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಮಾಯಾ ಜಾನ್ ಅವರು ಟೆಲಿಗ್ರಾಫ್‌ಗೆ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು, ಆಡಳಿತವನ್ನು ಮೌಲ್ಯೀಕರಿಸಬಾರದು. ಯುಜಿಸಿಯ ಪತ್ರವನ್ನು ಅದರ ಅಧಿಕಾರದ ಉಲ್ಲಂಘನೆ ಎಂದು ನಾವು ನೋಡುತ್ತೇವೆ. ಇದು ಅನಗತ್ಯ ರಾಜಕೀಯ ಹಸ್ತಕ್ಷೇಪ. ವಿಶ್ವವಿದ್ಯಾನಿಲಯಗಳು ಸ್ವಾಯತ್ತ ಸ್ಥಳವಾಗಿದೆ. ಅವುಗಳನ್ನು ಸ್ವಾಯತ್ತವಾಗಿರಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...