Homeಮುಖಪುಟಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

ಮೋದಿ ಚಿತ್ರವಿರುವ ಸೆಲ್ಫಿ ಪಾಯಿಂಟ್‌: ಡಿಸೈನ್‌ ಹಿಂಪಡೆದ UGC

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಹಿನ್ನೆಲೆಗೆ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ರಚಿಸುವಂತೆ ಕಾಲೇಜುಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ನಿರ್ದೇಶನ ನೀಡಿತ್ತು. ಇದೀಗ ವ್ಯಾಪಕ ವಿರೋಧದ ಬೆನ್ನಲ್ಲೇ ಯುಜಿಸಿ ಸೂಚಿಸಿದ ಡಿಸೈನ್‌ಗಳನ್ನು ವಾಪಾಸ್ಸು ಪಡೆಯಲಾಗಿದೆ.

ಯುಜಿಸಿ ನಿರ್ದೇಶನವನ್ನು ಆರಾಧಾನ ಸಂಸ್ಕೃತಿ ಎಂದು ಹಲವರು ಹೇಳಿದರೆ,  2024ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮೋದಿಯ ಪ್ರಚಾರ ತಂತ್ರ ಇದು ಎಂದು ಕೆಲವರು ಟೀಕಿಸಿದ್ದರು. ಸೆಲ್ಫಿ ಪಾಯಿಂಟ್‌ಗಳ ಸ್ಥಾಪನೆ ಕುರಿತ ನಿರ್ದೇಶನ ಜಾರಿಯಲ್ಲಿರುವಾಗ ನಿರ್ದೇಶನಗಳಲ್ಲಿ ಡಿಸೈನ್‌ಗಳನ್ನು ಏಕೆ ಹಿಂತೆಗೆದುಕೊಳ್ಳಲಾಗುತ್ತಿದೆ ಎಂಬುದನ್ನು ಯುಜಿಸಿ ಸ್ಪಷ್ಟಪಡಿಸಿಲ್ಲ.

ಯುಜಿಸಿಯ ಹಿಂದಿನ ನಿರ್ದೇಶನವು ಪ್ರತಿ ಸೆಲ್ಫಿ ಪಾಯಿಂಟ್‌ಗಳನ್ನು ಕ್ಯಾಂಪಸ್‌ನ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಬೇಕು ಮತ್ತು 3ಡಿ ಲೇಔಟ್ ಹೊಂದಿರಬೇಕು ಎಂದು ಹೇಳಿದೆ. ಇದು ಶಿಕ್ಷಣದ ಅಂತರಾಷ್ಟ್ರೀಕರಣ, ವೈವಿಧ್ಯತೆಯಲ್ಲಿ ಏಕತೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್, ಭಾರತೀಯ ಜ್ಞಾನ ವ್ಯವಸ್ಥೆ, ಬಹುಭಾಷಾತೆ ಮತ್ತು ಸಂಶೋಧನೆ ವಿಷಯಗಳನ್ನು ಶಿಫಾರಸು ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಲವಾರು ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳಿಗೆ ತಮಗೆ ಸಂಬಂಧವಿಲ್ಲದ ವ್ಯಕ್ತಿನಿಷ್ಠೆ ನಿರ್ಮಾಣ ಪ್ರಕ್ರಿಯೆಯಲ್ಲಿ ತೊಡಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಅವರು ಈ ಕುರಿತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ಪತ್ರ ಕಳುಹಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಯುವಕರ ಶಕ್ತಿ ಮತ್ತು ಉತ್ಸಾಹವನ್ನು ಬಳಸಿಕೊಳ್ಳಲು ಒಂದು ಅನನ್ಯ ಅವಕಾಶ ಎಂದು ಹೇಳಿದ್ದರು.

ನಿಮ್ಮ ಸಂಸ್ಥೆಯೊಳಗೆ ಸೆಲ್ಫಿ ಪಾಯಿಂಟ್ ಸ್ಥಾಪಿಸುವ ಮೂಲಕ ನಮ್ಮ ದೇಶವು ಮಾಡಿದ ಅದ್ಭುತ ಪ್ರಗತಿಯನ್ನು ನಾವು ಆಚರಿಸೋಣ ಮತ್ತು ಪ್ರಸಾರ ಮಾಡೋಣ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಸಾಧನೆಗಳ ಬಗ್ಗೆ ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಹೊಸ ಉಪಕ್ರಮಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವುದು ಸೆಲ್ಫಿ ಪಾಯಿಂಟ್‌ನ ಉದ್ದೇಶವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿತ್ತು.

ಇದರ ಬೆನ್ನಲ್ಲೇ ಯಾವುದೇ ಶಿಕ್ಷಣ ಸಂಸ್ಥೆಗಳು ಸರ್ಕಾರದ ಕಾರ್ಯಸೂಚಿಯನ್ನು ಉತ್ತೇಜಿಸುವಲ್ಲಿ ಹಿಂದೆಂದೂ ತೊಡಗಿಸಿಕೊಂಡಿಲ್ಲ ಎಂದು  ಯುಜಿಸಿ ಮಾಜಿ ಕಾರ್ಯದರ್ಶಿಯೊಬ್ಬರು ಪತ್ರಿಕೆಗೆ ತಿಳಿಸಿದ್ದರು. ದುರದೃಷ್ಟವಶಾತ್ ಜಗದೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪ್ರಸ್ತುತ ಯುಜಿಸಿ ಸರ್ಕಾರಕ್ಕಾಗಿ ಬಹಿರಂಗವಾಗಿ ಪ್ರಚಾರ ಮಾಡುತ್ತಿದೆ. ಇದು ಯುಜಿಸಿಯ ಕೆಲಸವಲ್ಲ. ಎಲ್ಲಾ ಸರ್ಕಾರಿ ಸಂಸ್ಥೆಗಳು ಮತ್ತು ಸ್ವಾಯತ್ತ ಸಂಸ್ಥೆಗಳು ನಿಷ್ಪಕ್ಷಪಾತವಾಗಿರಬೇಕು ಎಂದು ನಿರೀಕ್ಷಿಸಲಾಗಿದೆ. ಆದರೆ ಯುಜಿಸಿ ಕ್ರಮೇಣ ಆಡಳಿತ ಪಕ್ಷದ ಒಂದು ವಿಭಾಗವಾಗುತ್ತಿದೆ. ಯುಜಿಸಿಯಲ್ಲಿ ಈ ಮೊದಲು ಒಮ್ಮತದಿಂದ ನಿರ್ಧಾರವನ್ನು ಕೈಗೊಳ್ಳಲಾಗುತ್ತಿತ್ತು. ಇದರೆ ಈಗ ಏಕಮುಖ ಸಂವಹನವಾಗಿದೆ ಮತ್ತು ಬೇರೆ ಯಾರಿಗೂ ಮಾತನಾಡಲು ಅವಕಾಶವಿಲ್ಲದಂತಿದೆ ಎಂದು ಮಾಜಿ ಯುಜಿಸಿ ಕಾರ್ಯದರ್ಶಿಯೋರ್ವರು ಹೇಳಿರುವ ಬಗ್ಗೆ ಟೆಲಿಗ್ರಾಫ್‌ ವರದಿ ಮಾಡಿದೆ.

ದೆಹಲಿ ವಿಶ್ವವಿದ್ಯಾನಿಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯೆ ಮಾಯಾ ಜಾನ್ ಅವರು ಟೆಲಿಗ್ರಾಫ್‌ಗೆ ಈ ಕುರಿತು ಪ್ರತಿಕ್ರಿಯಿಸಿದ್ದು, ನಾವು ವಿಮರ್ಶಾತ್ಮಕವಾಗಿ ತೊಡಗಿಸಿಕೊಳ್ಳಬೇಕು, ಆಡಳಿತವನ್ನು ಮೌಲ್ಯೀಕರಿಸಬಾರದು. ಯುಜಿಸಿಯ ಪತ್ರವನ್ನು ಅದರ ಅಧಿಕಾರದ ಉಲ್ಲಂಘನೆ ಎಂದು ನಾವು ನೋಡುತ್ತೇವೆ. ಇದು ಅನಗತ್ಯ ರಾಜಕೀಯ ಹಸ್ತಕ್ಷೇಪ. ವಿಶ್ವವಿದ್ಯಾನಿಲಯಗಳು ಸ್ವಾಯತ್ತ ಸ್ಥಳವಾಗಿದೆ. ಅವುಗಳನ್ನು ಸ್ವಾಯತ್ತವಾಗಿರಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: 3 ರಾಜ್ಯಗಳಲ್ಲಿ ಒಂದೇ ಒಂದು ಖಾತೆ ತೆರೆಯದ ಎಎಪಿ: ನೋಟಾಗಿಂತಲೂ ಅಲ್ಪ ಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...