Homeಕರ್ನಾಟಕಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

- Advertisement -
- Advertisement -

ಗೂಗಲ್‌ನಲ್ಲಿ ಭಾರತದ ಕೊಳಕು ಭಾಷೆ ಎಂದು ಹುಡುಕಿದರೆ ಮೊದಲು ಸಿಗುತ್ತಿದ್ದದ್ದು ಕನ್ನಡ ಎಂದು. ಹೌದು, ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶಕ್ಕೆ ಕಾರಣ ಇದು. 2 ಸಾವಿರ ವರ್ಷಗಳ ಇತಿಹಾಸ ಇರುವ ಸುಂದರ, ಪ್ರಾಚೀನ ಕನ್ನಡ ಭಾಷೆಗೆ ವೆಬ್‌ಸೈಟ್‌ ಒಂದು ಅವಮಾನ ಮಾಡಿದೆ.

ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವನ್ನು ಕೊಳಕು ಭಾಷೆ ಎಂದು ತೋರಿದ ವೆಬ್‌ಸೈಟ್‌ ಬಗ್ಗೆ ಗೂಗಲ್‌ಗೆ ರಿಪೋರ್ಟ್ ಮಾಡಿದ್ದರು. ಇದಕ್ಕೆ ಎಚ್ಚೆತ್ತಿರುವ ಗೂಗಲ್ ವೆಬ್‌ಸೈಟ್‌ ಅನ್ನು ನಿರ್ಬಂಧಿಸಿದೆ. ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

Petition · This website says the Ugliest language in India is Kannada. Remove this by signing. · Change.org
ಗೂಗಲ್‌ನಲ್ಲಿ ಈ ಮೊದಲು ಕಾಣಿಸುತ್ತಿದ್ದ ಫಲಿತಾಂಶ

ಗೂಗಲ್‌ನಲ್ಲಿ ಬೆಳಗ್ಗೆವರೆಗೆ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ,ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಭಾಷೆ ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನ, ಸದ್ಯ ಈ ವೆಬ್‌ಸೈಟ್‌ನನ್ನೆ ಗೂಗಲ್ ತೆಗೆದುಹಾಕಿದೆ.

ಕನ್ನಡಕ್ಕೆ ಅವಮಾನ ಮಾಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದ ಜನ, ಈ ವೆಬ್‌ಸೈಟ್ ಬಗ್ಗೆ ರಿಪೋರ್ಟ್ ಮಾಡಿದ್ದರು. ಕನ್ನಡದ ಶ್ರೇಷ್ಠತೆ ಬಗ್ಗೆ ದನಿ ಎತ್ತಿದ್ದರು.

ನಂತರದ ಸರ್ಚ್ ರಿಸಲ್ಟ್

ಆದರೆ, ಗೂಗಲ್​ನಂತಹ ತಂತ್ರಜ್ಞಾನದ ದೈತ್ಯ ಸಂಸ್ಥೆ ಒಂದು ಭಾಷೆ ಬಗ್ಗೆ ತಿಳಿಸು ಇಂತಹ ವಿಚಾರಗಳತ್ತ ಸೂಕ್ಷ್ಮವಾಗಿ ಗಮನ ನೀಡಬೇಕು. ಯಾವುದೇ ಒಂದು ಭಾಷೆಯನ್ನು ಈ ರೀತಿ ಹೇಳಿದರೇ ಒಂದು ಸಮುದಾಯ, ಸಂಸ್ಕೃತಿ ಮತ್ತು ಸೌಹಾರ್ದತೆಗೆ ಭಂಗ ತರುವ ವಿಷಯಗಳು ಪ್ರಕಟಗೊಳ್ಳಲು ಆಸ್ಪದ ನೀಡಬಾರದು.

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಈ ರೀತಿಯಾಗಲು ಕಾರಣವೇನು….?

ಗೂಗಲ್, ಕೀ ವರ್ಡ್‌ಗಳ ಆಧಾರದಲ್ಲಿ ಮೇಲೆ ಹುಡುಕಾಟ ನಡೆಸಿದಾಗ ಫಲಿತಾಂಶ ತೋರಿಸುತ್ತದೆ. ವೆಬ್ ಸೈಟ್‌ಗಳನ್ನು ರೂಪಿಸಿದಾಗ, ಪ್ರತಿ ಪುಟದಲ್ಲೂ ಹುಡುಕಲು ಸಹಕಾರಿಯಾಗುವಂತೆ ಒಂದಿಷ್ಟು ಕೀ ವರ್ಡ್‌ಗಳನ್ನು ಹಾಕಲಾಗುತ್ತೆ. ಈ ಪದಗಳ ಮೂಲಕ ಗೂಗಲ್ ಸರ್ಚ್ ಇಂಜಿನ್‌ನ ಕ್ರಮಗಳ ಆಧಾರದಲ್ಲಿ ಜನರು ಹುಡುಕುವ ಪದವನ್ನು ಹೊಂದಿಸಿ ಫಲಿತಾಂಶ ತೋರಿಸುತ್ತವೆ.

ಈ ಬಗ್ಗೆ ಅರುಣ್ ಜಾವಗಲ್ ಫೇಸ್‌ಬುಕ್‌ನಲ್ಲಿ ವಿವರವಾಗಿ ಬರೆದಿದ್ದಾರೆ.


ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಬಾಶೆಯೂ ಕೊಳಕಲ್ಲ. ಕನ್ನಡವನ್ನು ಕೊಳಕು ಬಾಶೆ ಎಂದು ಹೇಳಿದವರಿಗೆ ಸೂಕ್ತ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....