Homeಕರ್ನಾಟಕಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

- Advertisement -
- Advertisement -

ಗೂಗಲ್‌ನಲ್ಲಿ ಭಾರತದ ಕೊಳಕು ಭಾಷೆ ಎಂದು ಹುಡುಕಿದರೆ ಮೊದಲು ಸಿಗುತ್ತಿದ್ದದ್ದು ಕನ್ನಡ ಎಂದು. ಹೌದು, ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶಕ್ಕೆ ಕಾರಣ ಇದು. 2 ಸಾವಿರ ವರ್ಷಗಳ ಇತಿಹಾಸ ಇರುವ ಸುಂದರ, ಪ್ರಾಚೀನ ಕನ್ನಡ ಭಾಷೆಗೆ ವೆಬ್‌ಸೈಟ್‌ ಒಂದು ಅವಮಾನ ಮಾಡಿದೆ.

ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವನ್ನು ಕೊಳಕು ಭಾಷೆ ಎಂದು ತೋರಿದ ವೆಬ್‌ಸೈಟ್‌ ಬಗ್ಗೆ ಗೂಗಲ್‌ಗೆ ರಿಪೋರ್ಟ್ ಮಾಡಿದ್ದರು. ಇದಕ್ಕೆ ಎಚ್ಚೆತ್ತಿರುವ ಗೂಗಲ್ ವೆಬ್‌ಸೈಟ್‌ ಅನ್ನು ನಿರ್ಬಂಧಿಸಿದೆ. ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

Petition · This website says the Ugliest language in India is Kannada. Remove this by signing. · Change.org
ಗೂಗಲ್‌ನಲ್ಲಿ ಈ ಮೊದಲು ಕಾಣಿಸುತ್ತಿದ್ದ ಫಲಿತಾಂಶ

ಗೂಗಲ್‌ನಲ್ಲಿ ಬೆಳಗ್ಗೆವರೆಗೆ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ,ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಭಾಷೆ ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನ, ಸದ್ಯ ಈ ವೆಬ್‌ಸೈಟ್‌ನನ್ನೆ ಗೂಗಲ್ ತೆಗೆದುಹಾಕಿದೆ.

ಕನ್ನಡಕ್ಕೆ ಅವಮಾನ ಮಾಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದ ಜನ, ಈ ವೆಬ್‌ಸೈಟ್ ಬಗ್ಗೆ ರಿಪೋರ್ಟ್ ಮಾಡಿದ್ದರು. ಕನ್ನಡದ ಶ್ರೇಷ್ಠತೆ ಬಗ್ಗೆ ದನಿ ಎತ್ತಿದ್ದರು.

ನಂತರದ ಸರ್ಚ್ ರಿಸಲ್ಟ್

ಆದರೆ, ಗೂಗಲ್​ನಂತಹ ತಂತ್ರಜ್ಞಾನದ ದೈತ್ಯ ಸಂಸ್ಥೆ ಒಂದು ಭಾಷೆ ಬಗ್ಗೆ ತಿಳಿಸು ಇಂತಹ ವಿಚಾರಗಳತ್ತ ಸೂಕ್ಷ್ಮವಾಗಿ ಗಮನ ನೀಡಬೇಕು. ಯಾವುದೇ ಒಂದು ಭಾಷೆಯನ್ನು ಈ ರೀತಿ ಹೇಳಿದರೇ ಒಂದು ಸಮುದಾಯ, ಸಂಸ್ಕೃತಿ ಮತ್ತು ಸೌಹಾರ್ದತೆಗೆ ಭಂಗ ತರುವ ವಿಷಯಗಳು ಪ್ರಕಟಗೊಳ್ಳಲು ಆಸ್ಪದ ನೀಡಬಾರದು.

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಈ ರೀತಿಯಾಗಲು ಕಾರಣವೇನು….?

ಗೂಗಲ್, ಕೀ ವರ್ಡ್‌ಗಳ ಆಧಾರದಲ್ಲಿ ಮೇಲೆ ಹುಡುಕಾಟ ನಡೆಸಿದಾಗ ಫಲಿತಾಂಶ ತೋರಿಸುತ್ತದೆ. ವೆಬ್ ಸೈಟ್‌ಗಳನ್ನು ರೂಪಿಸಿದಾಗ, ಪ್ರತಿ ಪುಟದಲ್ಲೂ ಹುಡುಕಲು ಸಹಕಾರಿಯಾಗುವಂತೆ ಒಂದಿಷ್ಟು ಕೀ ವರ್ಡ್‌ಗಳನ್ನು ಹಾಕಲಾಗುತ್ತೆ. ಈ ಪದಗಳ ಮೂಲಕ ಗೂಗಲ್ ಸರ್ಚ್ ಇಂಜಿನ್‌ನ ಕ್ರಮಗಳ ಆಧಾರದಲ್ಲಿ ಜನರು ಹುಡುಕುವ ಪದವನ್ನು ಹೊಂದಿಸಿ ಫಲಿತಾಂಶ ತೋರಿಸುತ್ತವೆ.

ಈ ಬಗ್ಗೆ ಅರುಣ್ ಜಾವಗಲ್ ಫೇಸ್‌ಬುಕ್‌ನಲ್ಲಿ ವಿವರವಾಗಿ ಬರೆದಿದ್ದಾರೆ.


ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಬಾಶೆಯೂ ಕೊಳಕಲ್ಲ. ಕನ್ನಡವನ್ನು ಕೊಳಕು ಬಾಶೆ ಎಂದು ಹೇಳಿದವರಿಗೆ ಸೂಕ್ತ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...