Homeಕರ್ನಾಟಕಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

- Advertisement -
- Advertisement -

ಗೂಗಲ್‌ನಲ್ಲಿ ಭಾರತದ ಕೊಳಕು ಭಾಷೆ ಎಂದು ಹುಡುಕಿದರೆ ಮೊದಲು ಸಿಗುತ್ತಿದ್ದದ್ದು ಕನ್ನಡ ಎಂದು. ಹೌದು, ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶಕ್ಕೆ ಕಾರಣ ಇದು. 2 ಸಾವಿರ ವರ್ಷಗಳ ಇತಿಹಾಸ ಇರುವ ಸುಂದರ, ಪ್ರಾಚೀನ ಕನ್ನಡ ಭಾಷೆಗೆ ವೆಬ್‌ಸೈಟ್‌ ಒಂದು ಅವಮಾನ ಮಾಡಿದೆ.

ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವನ್ನು ಕೊಳಕು ಭಾಷೆ ಎಂದು ತೋರಿದ ವೆಬ್‌ಸೈಟ್‌ ಬಗ್ಗೆ ಗೂಗಲ್‌ಗೆ ರಿಪೋರ್ಟ್ ಮಾಡಿದ್ದರು. ಇದಕ್ಕೆ ಎಚ್ಚೆತ್ತಿರುವ ಗೂಗಲ್ ವೆಬ್‌ಸೈಟ್‌ ಅನ್ನು ನಿರ್ಬಂಧಿಸಿದೆ. ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

Petition · This website says the Ugliest language in India is Kannada. Remove this by signing. · Change.org
ಗೂಗಲ್‌ನಲ್ಲಿ ಈ ಮೊದಲು ಕಾಣಿಸುತ್ತಿದ್ದ ಫಲಿತಾಂಶ

ಗೂಗಲ್‌ನಲ್ಲಿ ಬೆಳಗ್ಗೆವರೆಗೆ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ,ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಭಾಷೆ ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನ, ಸದ್ಯ ಈ ವೆಬ್‌ಸೈಟ್‌ನನ್ನೆ ಗೂಗಲ್ ತೆಗೆದುಹಾಕಿದೆ.

ಕನ್ನಡಕ್ಕೆ ಅವಮಾನ ಮಾಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದ ಜನ, ಈ ವೆಬ್‌ಸೈಟ್ ಬಗ್ಗೆ ರಿಪೋರ್ಟ್ ಮಾಡಿದ್ದರು. ಕನ್ನಡದ ಶ್ರೇಷ್ಠತೆ ಬಗ್ಗೆ ದನಿ ಎತ್ತಿದ್ದರು.

ನಂತರದ ಸರ್ಚ್ ರಿಸಲ್ಟ್

ಆದರೆ, ಗೂಗಲ್​ನಂತಹ ತಂತ್ರಜ್ಞಾನದ ದೈತ್ಯ ಸಂಸ್ಥೆ ಒಂದು ಭಾಷೆ ಬಗ್ಗೆ ತಿಳಿಸು ಇಂತಹ ವಿಚಾರಗಳತ್ತ ಸೂಕ್ಷ್ಮವಾಗಿ ಗಮನ ನೀಡಬೇಕು. ಯಾವುದೇ ಒಂದು ಭಾಷೆಯನ್ನು ಈ ರೀತಿ ಹೇಳಿದರೇ ಒಂದು ಸಮುದಾಯ, ಸಂಸ್ಕೃತಿ ಮತ್ತು ಸೌಹಾರ್ದತೆಗೆ ಭಂಗ ತರುವ ವಿಷಯಗಳು ಪ್ರಕಟಗೊಳ್ಳಲು ಆಸ್ಪದ ನೀಡಬಾರದು.

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಈ ರೀತಿಯಾಗಲು ಕಾರಣವೇನು….?

ಗೂಗಲ್, ಕೀ ವರ್ಡ್‌ಗಳ ಆಧಾರದಲ್ಲಿ ಮೇಲೆ ಹುಡುಕಾಟ ನಡೆಸಿದಾಗ ಫಲಿತಾಂಶ ತೋರಿಸುತ್ತದೆ. ವೆಬ್ ಸೈಟ್‌ಗಳನ್ನು ರೂಪಿಸಿದಾಗ, ಪ್ರತಿ ಪುಟದಲ್ಲೂ ಹುಡುಕಲು ಸಹಕಾರಿಯಾಗುವಂತೆ ಒಂದಿಷ್ಟು ಕೀ ವರ್ಡ್‌ಗಳನ್ನು ಹಾಕಲಾಗುತ್ತೆ. ಈ ಪದಗಳ ಮೂಲಕ ಗೂಗಲ್ ಸರ್ಚ್ ಇಂಜಿನ್‌ನ ಕ್ರಮಗಳ ಆಧಾರದಲ್ಲಿ ಜನರು ಹುಡುಕುವ ಪದವನ್ನು ಹೊಂದಿಸಿ ಫಲಿತಾಂಶ ತೋರಿಸುತ್ತವೆ.

ಈ ಬಗ್ಗೆ ಅರುಣ್ ಜಾವಗಲ್ ಫೇಸ್‌ಬುಕ್‌ನಲ್ಲಿ ವಿವರವಾಗಿ ಬರೆದಿದ್ದಾರೆ.


ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಬಾಶೆಯೂ ಕೊಳಕಲ್ಲ. ಕನ್ನಡವನ್ನು ಕೊಳಕು ಬಾಶೆ ಎಂದು ಹೇಳಿದವರಿಗೆ ಸೂಕ್ತ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...