Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...