Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...