Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...