Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...