Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...