Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...