Homeಅಂತರಾಷ್ಟ್ರೀಯ'ಕೊಳಕ ಹಿಂದೂ': ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

‘ಕೊಳಕ ಹಿಂದೂ’: ಅಮೆರಿಕಾದಲ್ಲಿ ಮತ್ತೊಂದು ಜನಾಂಗೀಯ ನಿಂದನೆ ಪ್ರಕರಣ

- Advertisement -
- Advertisement -

ಅಮೆರಿಕಾದಲ್ಲಿ ಭಾರತೀಯ ಮೂಲದ ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ ಥಳಿಸಿದ್ದು ಇತ್ತೀಚೆಗೆ ವರದಿಯಾಗಿತ್ತು. ಅದರ ಬೆನ್ನಿಗೆ ಮತ್ತೊಂದು ಜನಾಂಗೀಯ ನಿಂದನೆ ಮಾಡಿರುವ ಘಟನೆ ಅಮೆರಿಕಾದಲ್ಲಿ ವರದಿಯಾಗಿದೆ. ಅದಾಗ್ಯೂ ಈ ಬಾರಿ ಜನಾಂಗೀಯ ನಿಂದನೆ ಮಾಡಿರುವುದು ಭಾರತೀಯ ಮೂಲದ ವ್ಯಕ್ತಿಯೆ ಎಂದು ತಿಳಿದು ಬಂದಿದೆ. ಹೊಸ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗದೆ.

ಆಗಸ್ಟ್ 21 ರಂದು ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕೃಷ್ಣನ್ ಜಯರಾಮನ್ ಎಂಬ ವ್ಯಕ್ತಿಯನ್ನು ತೇಜಿಂದರ್ ಸಿಂಗ್ ಎಂಬವರು ನಿಂದಿಸಿದ್ದು, ‘ಕೊಳಕು ಹಿಂದೂ’ ಎಂದು ಕರೆದಿದ್ದಾರೆ. ಮಾಧ್ಯಮ ವೆಬ್‌ಸೈಟ್ KTLA ಪ್ರಕಾರ, ತೇಜಿಂದರ್‌‌ ಸಿಂಗ್ ಅವರು ಕೃಷ್ಣನ್ ಜಯರಾಮನ್‌ ಮೇಲೆ ಉಗುಳಿ, ಜನಾಂಗೀಯ ನಿಂದನೆ ಮಾಡಿದ್ದಾರೆ. “ನೀವು ಹಿಂದೂಗಳು ನಾಚಿಕೆಗೇಡಾಗಿದ್ದು, ಅಸಹ್ಯಕರ” ಎಂದು ತೇಜಿಂದರ್‌ ಸಿಂಗ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೊದಲ್ಲಿ ತೇಜಿಂದರ್‌‌ ಅವರು ಅಶ್ಲೀಲ ಪದ ಬಳಿಸಿದ್ದಾರೆ. ಆರೋಪಿ ತೇಜಿಂದರ್‌ ಸಿಂಗ್‌ ಕೃಷ್ಣನ್ ಅವರನ್ನು ‘ಅಸಹ್ಯಕರ’ ಎಂದು ಪದೇ ಪದೇ ಕರೆಯುತ್ತಾರೆ. ‘ಇದು ಭಾರತವಲ್ಲ’ ಎಂದು ತೇಜಿಂದರ್‌ ಹೇಳುತ್ತಾರೆ.

ತನ್ನ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯೂ ಭಾರತೀಯನೇ ಎಂಬ ಕಾರಣಕ್ಕೆ ಕೃಷ್ಣನ್ ವಿಚಲಿತರಾಗಿದ್ದು, ತನ್ನ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿ ಇನ್ನೂ ಹೆಚ್ಚಿನ ದಾಳಿಗೆ ಇಳಿಯಬಹುದು ಎಂದು ಅವರು ಭಯಭೀತರಾಗಿದ್ದರು ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ. ಕೊನೆಗೆ ಪೊಲೀಸರು ತೇಜಿಂದರ್‌ ಸಿಂಗ್ ಅವರನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ. ಫ್ರೀಮಾಂಟ್ ಪೊಲೀಸರು ತೇಜಿಂದರ್ ಸಿಂಗ್ ವಿರುದ್ಧ ನಾಗರಿಕ ಹಕ್ಕುಗಳ ಉಲ್ಲಂಘನೆ, ಹಲ್ಲೆ ಮತ್ತು ಆಕ್ಷೇಪಾರ್ಹ ಭಾಷೆ ಬಳಸಿ ಶಾಂತಿ ಕದಡುವ ದ್ವೇಷದ ಅಪರಾಧದ ಆರೋಪ ಹೊರಿಸಿದ್ದಾರೆ.

ಇದನ್ನೂ ಓದಿ: ಅಮೆರಿಕ: ಭಾರತೀಯ ಮೂಲದ ಮಹಿಳೆಯರ ಮೇಲೆ ಜನಾಂಗೀಯ ದಾಳಿ

ಪೊಲೀಸ್ ಮುಖ್ಯಸ್ಥ ಸೀನ್ ವಾಷಿಂಗ್ಟನ್ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ್ದು, ಘಟನೆಯನ್ನು ಹೇಯ ಎಂದು ಬಣ್ಣಿಸಿದ್ದು, ದ್ವೇಷದ ಅಪರಾಧಗಳ ವಿರುದ್ಧ ಕಾನೂನುಬದ್ಧ ಕ್ರಮವನ್ನು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆಗೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಸಂವಿಧಾನ ಪೀಠ

ಏಪ್ರಿಲ್ 7 ರಿಂದ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು 9 ನ್ಯಾಯಾಧೀಶರ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಫೆಬ್ರವರಿ 16, ಸೋಮವಾರದಂದು ಘೋಷಿಸಿರುವುದಾಗಿ ಲೈವ್ ಲಾ...

ಬಾಂಗ್ಲಾ ಪ್ರಧಾನಿ ಪದಗ್ರಹಣ : ಭಾರತವನ್ನು ಪ್ರತಿನಿಧಿಸಲಿರುವ ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 17ರಂದು ನಡೆಯಲಿರುವ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಖ್ ರೆಹಮಾನ್ ಅವರ ಪದಗ್ರಹಣದ ಸಮಾರಂಭದಲ್ಲಿ ಭಾರತದಿಂದ ಅಧಿಕೃತ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು...

ಕೇಂದ್ರಪಾರ ಅಂಗನವಾಡಿ ವಿವಾದ: ದಲಿತ ಮಹಿಳೆ ತಯಾರಿಸಿದ ಆಹಾರ ಸೇವಿಸಿದ ಸಂಸದ ಬೈಜಯಂತ್ ಪಾಂಡಾ

ಒಡಿಶಾದ ಕೇಂದ್ರಪಾರ ಸಂಸದ ಬೈಜಯಂತ್ ಪಾಂಡಾ ಅವರು ಭಾನುವಾರ ರಾಜನಗರ ಬ್ಲಾಕ್‌ನ ನುಗಾಂವ್‌ಗೆ ಭೇಟಿ ನೀಡಿ ಸ್ಥಳೀಯ ಅಂಗನವಾಡಿ ಕೇಂದ್ರದ ದಲಿತ ಮಹಿಳೆ ತಯಾರಿಸಿದ ಊಟವನ್ನು ಸೇವಿಸಿದರು. ಜಾತಿ ಕಾರಣಕ್ಕೆ ಗ್ರಾಮಸ್ಥರು ಮಕ್ಕಳನ್ನು...

ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ 'ಗಂಭೀರ ದುರ್ನಡತೆ' ಆರೋಪ ಮಾಡಿದೆ...

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ...

ಬಂಗಾಳ: ಎಸ್‌ಐಆರ್ ವಿಚಾರಣೆಗೆಂದು ಕರೆ ಮಾಡಿ ವ್ಯಕ್ತಿಯನ್ನು ಕೊಂದು, ಕತ್ತರಿಸಿ, ಮೂರು ಚೀಲಗಳಲ್ಲಿ ಕಾಲುವೆಗೆ ಎಸೆದ ಬಿಎಲ್‌ಒ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ 36 ವರ್ಷದ ವ್ಯಕ್ತಿಯೊಬ್ಬರ ಭೀಕರ ಕೊಲೆ ಮತ್ತು ಛಿದ್ರಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ...

ಫೆ.17ರಂದು ತಾರಿಖ್ ರೆಹಮಾನ್ ಪ್ರಮಾಣವಚನ : ಪ್ರಧಾನಿ ಮೋದಿಗೆ ಆಹ್ವಾನ

ವಿದ್ಯಾರ್ಥಿ ದಂಗೆ, ಆಡಳಿತ ಅಸ್ಥಿರತೆಯ ಬಳಿಕ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ದತೆಗಳು ನಡೆದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಮುಖ್ಯಸ್ಥ ತಾರಿಖ್ ರೆಹಮಾನ್ ನೂತನ ಪ್ರಧಾನಿಯಾಗಿ ಮಂಗಳವಾರ (ಫೆ.17) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೊಸ...

ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾರ್ಚ್ 9ರಂದು ಚರ್ಚೆ : ಸಚಿವ ಕಿರಣ್ ರಿಜಿಜು

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತ ಚಲಾವಣೆ ಮಾರ್ಚ್ 9ರಂದು ನಡೆಯಲಿದೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ...

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...