Homeಮುಖಪುಟಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

- Advertisement -
- Advertisement -

ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ಮತ್ತು ರಾಜಕೀಯ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇದರೊಂದಿಗೆ, ರಾಜ್ಯಸಭೆಯ ನಾಮನಿರ್ದೇಶಿತ ವರ್ಗದ ಎಲ್ಲಾ 12 ಸ್ಥಾನಗಳು ಭರ್ತಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನಾಲ್ಕು ಸ್ಥಾನಗಳು ಮತ್ತು ಹರಿಯಾಣದ ಒಂದು ಸ್ಥಾನ ಖಾಲಿಯಿದೆ. 240 ಸದಸ್ಯರ ಸದನದಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 135 ಸಂಸದರ ಬೆಂಬಲವನ್ನು ಹೊಂದಿದೆ, ಇದರಲ್ಲಿ ಸಾಮಾನ್ಯವಾಗಿ ಸರ್ಕಾರವನ್ನು ಬೆಂಬಲಿಸುವ ಎಲ್ಲಾ 12 ನಾಮನಿರ್ದೇಶಿತ ಸಂಸದರು ಮತ್ತು ಒಬ್ಬ ಸ್ವತಂತ್ರ ಸದಸ್ಯ ಸೇರಿದ್ದಾರೆ.

ರಾಜ್ಯಸಭೆಗೆ ಹೊಸದಾಗಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಬಗ್ಗೆ ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರಾತ್ರಿ ಅಧಿಸೂಚನೆ ಹೊರಡಿಸಿದೆ.

ವಿದೇಶಾಂಗ ವ್ಯವಹಾರಗಳಲ್ಲಿ ಪರಿಣತಿ ಹೊಂದಿದ್ದಕ್ಕಾಗಿ ಶ್ರಿಂಗ್ಲಾ ಅವರನ್ನು ರಾಜ್ಯಸಭೆಗೆ ಕರೆತರಲಾಗಿದೆ. ವಿದೇಶಾಂಗ ಕಾರ್ಯದರ್ಶಿಯಾಗುವ ಮೊದಲು ಅಮೆರಿಕದ ಮಾಜಿ ರಾಯಭಾರಿಯಾಗಿದ್ದ ಶ್ರಿಂಗ್ಲಾ, 2023ರಲ್ಲಿ ಭಾರತದ ಜಿ 20 ಅಧ್ಯಕ್ಷತೆಯ ಮುಖ್ಯ ಸಂಯೋಜಕರಾಗಿದ್ದರು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಇತ್ತೀಚಿನ ಜಾಗತಿಕ ಸಂಪರ್ಕದ ಭಾಗವಾಗಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಗೂ ಮುನ್ನ, ಶ್ರಿಂಗ್ಲಾ ಅವರು ರಾಜಕೀಯಕ್ಕೆ ಧುಮುಕುತ್ತಾರೆ ಮತ್ತು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳಿದ್ದವು. 2023ರ ಕೊನೆಯಲ್ಲಿ ಮತ್ತು 2024ರ ಆರಂಭದಲ್ಲಿ, ಅವರು ತಮ್ಮ ‘ಡಾರ್ಜಿಲಿಂಗ್ ವೆಲ್ಫೇರ್ ಸೊಸೈಟಿ’ ಮೂಲಕ ಆ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹೆಸರುವಾಸಿಯಾಗಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, 2016ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋಲನುಭವಿಸಿದ್ದರು.

ಗುಲ್ಶನ್ ಕುಮಾರ್ ಮತ್ತು ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣಗಳಲ್ಲಿ, 1993ರ ಮುಂಬೈ ಸರಣಿ ಸ್ಫೋಟಗಳು ಮತ್ತು 2003 ರ ಗೇಟ್‌ವೇ ಆಫ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.

ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ದೆಹಲಿಯ ಗಾರ್ಗಿ ಕಾಲೇಜಿನ ಮಾಜಿ ಅಸೋಸಿಯೇಟ್ ಪ್ರೊಫೆಸರ್. ಇವರು 2020ರಲ್ಲಿ ಪದ್ಮಶ್ರೀ ಪ್ರಶಸ್ತಿ ಭಾಜನರಾಗಿದ್ದಾರೆ. ಡಾ. ಜೈನ್ ಒಬ್ಬರು ಪ್ರಸಿದ್ಧ ರಾಜಕೀಯ ತಜ್ಞೆಯೂ ಹೌದು. ಟೈಮ್ಸ್ ಆಫ್ ಇಂಡಿಯಾದ ಮಾಜಿ ಸಂಪಾದಕ ಗಿರಿಲಾಲ್ ಜೈನ್ ಅವರ ಪುತ್ರಿಯಾಗಿರುವ ಜೈನ್ ಅವರನ್ನು, 2014ರಲ್ಲಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು.

ಶಿಕ್ಷಕರಾಗಿರುವ ಸದಾನಂದನ್ ಮಾಸ್ಟರ್, ಕೇರಳದಲ್ಲಿ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 1994ರಲ್ಲಿ ಸಿಪಿಐ(ಎಂ) ಕಾರ್ಯಕರ್ತರ ದಾಳಿಯಲ್ಲಿ ಇವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಘ ಪರಿವಾರದ ಹಿರಿಯ ನಾಯಕರು ನಡೆಸುತ್ತಿರುವ ಬಲಪಂಥೀಯ ಚಿಂತಕರ ಚಾವಡಿಯಾದ ‘ಭಾರತೀಯ ವಿಚಾರ ಕೇಂದ್ರ’ದೊಂದಿಗೆ ಸದಾನಂದನ್ ಮಾಸ್ಟರ್ ನಿಕಟ ಸಂಬಂಧ ಹೊಂದಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ವಾರ ಮೊದಲು ಆರು ವರ್ಷಗಳ ಅವಧಿಗೆ ಹೊಸ ಸದಸ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಸಂಸದರು ನಾಮನಿರ್ದೇಶನಗೊಂಡ ಆರು ತಿಂಗಳೊಳಗೆ ಒಂದು ಪಕ್ಷವನ್ನು ಸೇರಬಹುದು.

ಪ್ರಸ್ತುತ ಎಂಟು ನಾಮನಿರ್ದೇಶಿತ ಸಂಸದರಲ್ಲಿ, ಗುಲಾಮ್ ಅಲಿ (ಸೆಪ್ಟೆಂಬರ್ 2028 ರವರೆಗೆ ಅಧಿಕಾರಾವಧಿ) ಮತ್ತು ಸತ್ನಮ್ ಸಿಂಗ್ ಸಂಧು (ಜನವರಿ 2030) ಬಿಜೆಪಿಗೆ ಸೇರಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ (ನಿವೃತ್ತ) ರಂಜನ್ ಗೊಗೊಯ್ ಅವರ ಅಧಿಕಾರಾವಧಿ ಮುಗಿದಾಗ ಒಂದು ನಾಮನಿರ್ದೇಶಿತ ಸ್ಥಾನ ಖಾಲಿಯಾಗಲಿದೆ.

ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ (ಜುಲೈ 2028 ರವರೆಗೆ), ಮತ್ತು ಸುಧಾ ಮೂರ್ತಿ (ಮಾರ್ಚ್ 2030 ರವರೆಗೆ ಅವಧಿ) ಇತರ ನಾಮನಿರ್ದೇಶಿತ ಸದಸ್ಯರು.

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...