Homeಮುಖಪುಟಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

- Advertisement -
- Advertisement -

ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ಮತ್ತು ರಾಜಕೀಯ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇದರೊಂದಿಗೆ, ರಾಜ್ಯಸಭೆಯ ನಾಮನಿರ್ದೇಶಿತ ವರ್ಗದ ಎಲ್ಲಾ 12 ಸ್ಥಾನಗಳು ಭರ್ತಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನಾಲ್ಕು ಸ್ಥಾನಗಳು ಮತ್ತು ಹರಿಯಾಣದ ಒಂದು ಸ್ಥಾನ ಖಾಲಿಯಿದೆ. 240 ಸದಸ್ಯರ ಸದನದಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 135 ಸಂಸದರ ಬೆಂಬಲವನ್ನು ಹೊಂದಿದೆ, ಇದರಲ್ಲಿ ಸಾಮಾನ್ಯವಾಗಿ ಸರ್ಕಾರವನ್ನು ಬೆಂಬಲಿಸುವ ಎಲ್ಲಾ 12 ನಾಮನಿರ್ದೇಶಿತ ಸಂಸದರು ಮತ್ತು ಒಬ್ಬ ಸ್ವತಂತ್ರ ಸದಸ್ಯ ಸೇರಿದ್ದಾರೆ.

ರಾಜ್ಯಸಭೆಗೆ ಹೊಸದಾಗಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಬಗ್ಗೆ ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರಾತ್ರಿ ಅಧಿಸೂಚನೆ ಹೊರಡಿಸಿದೆ.

ವಿದೇಶಾಂಗ ವ್ಯವಹಾರಗಳಲ್ಲಿ ಪರಿಣತಿ ಹೊಂದಿದ್ದಕ್ಕಾಗಿ ಶ್ರಿಂಗ್ಲಾ ಅವರನ್ನು ರಾಜ್ಯಸಭೆಗೆ ಕರೆತರಲಾಗಿದೆ. ವಿದೇಶಾಂಗ ಕಾರ್ಯದರ್ಶಿಯಾಗುವ ಮೊದಲು ಅಮೆರಿಕದ ಮಾಜಿ ರಾಯಭಾರಿಯಾಗಿದ್ದ ಶ್ರಿಂಗ್ಲಾ, 2023ರಲ್ಲಿ ಭಾರತದ ಜಿ 20 ಅಧ್ಯಕ್ಷತೆಯ ಮುಖ್ಯ ಸಂಯೋಜಕರಾಗಿದ್ದರು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಇತ್ತೀಚಿನ ಜಾಗತಿಕ ಸಂಪರ್ಕದ ಭಾಗವಾಗಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಗೂ ಮುನ್ನ, ಶ್ರಿಂಗ್ಲಾ ಅವರು ರಾಜಕೀಯಕ್ಕೆ ಧುಮುಕುತ್ತಾರೆ ಮತ್ತು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳಿದ್ದವು. 2023ರ ಕೊನೆಯಲ್ಲಿ ಮತ್ತು 2024ರ ಆರಂಭದಲ್ಲಿ, ಅವರು ತಮ್ಮ ‘ಡಾರ್ಜಿಲಿಂಗ್ ವೆಲ್ಫೇರ್ ಸೊಸೈಟಿ’ ಮೂಲಕ ಆ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹೆಸರುವಾಸಿಯಾಗಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, 2016ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋಲನುಭವಿಸಿದ್ದರು.

ಗುಲ್ಶನ್ ಕುಮಾರ್ ಮತ್ತು ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣಗಳಲ್ಲಿ, 1993ರ ಮುಂಬೈ ಸರಣಿ ಸ್ಫೋಟಗಳು ಮತ್ತು 2003 ರ ಗೇಟ್‌ವೇ ಆಫ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.

ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ದೆಹಲಿಯ ಗಾರ್ಗಿ ಕಾಲೇಜಿನ ಮಾಜಿ ಅಸೋಸಿಯೇಟ್ ಪ್ರೊಫೆಸರ್. ಇವರು 2020ರಲ್ಲಿ ಪದ್ಮಶ್ರೀ ಪ್ರಶಸ್ತಿ ಭಾಜನರಾಗಿದ್ದಾರೆ. ಡಾ. ಜೈನ್ ಒಬ್ಬರು ಪ್ರಸಿದ್ಧ ರಾಜಕೀಯ ತಜ್ಞೆಯೂ ಹೌದು. ಟೈಮ್ಸ್ ಆಫ್ ಇಂಡಿಯಾದ ಮಾಜಿ ಸಂಪಾದಕ ಗಿರಿಲಾಲ್ ಜೈನ್ ಅವರ ಪುತ್ರಿಯಾಗಿರುವ ಜೈನ್ ಅವರನ್ನು, 2014ರಲ್ಲಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು.

ಶಿಕ್ಷಕರಾಗಿರುವ ಸದಾನಂದನ್ ಮಾಸ್ಟರ್, ಕೇರಳದಲ್ಲಿ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 1994ರಲ್ಲಿ ಸಿಪಿಐ(ಎಂ) ಕಾರ್ಯಕರ್ತರ ದಾಳಿಯಲ್ಲಿ ಇವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಘ ಪರಿವಾರದ ಹಿರಿಯ ನಾಯಕರು ನಡೆಸುತ್ತಿರುವ ಬಲಪಂಥೀಯ ಚಿಂತಕರ ಚಾವಡಿಯಾದ ‘ಭಾರತೀಯ ವಿಚಾರ ಕೇಂದ್ರ’ದೊಂದಿಗೆ ಸದಾನಂದನ್ ಮಾಸ್ಟರ್ ನಿಕಟ ಸಂಬಂಧ ಹೊಂದಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ವಾರ ಮೊದಲು ಆರು ವರ್ಷಗಳ ಅವಧಿಗೆ ಹೊಸ ಸದಸ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಸಂಸದರು ನಾಮನಿರ್ದೇಶನಗೊಂಡ ಆರು ತಿಂಗಳೊಳಗೆ ಒಂದು ಪಕ್ಷವನ್ನು ಸೇರಬಹುದು.

ಪ್ರಸ್ತುತ ಎಂಟು ನಾಮನಿರ್ದೇಶಿತ ಸಂಸದರಲ್ಲಿ, ಗುಲಾಮ್ ಅಲಿ (ಸೆಪ್ಟೆಂಬರ್ 2028 ರವರೆಗೆ ಅಧಿಕಾರಾವಧಿ) ಮತ್ತು ಸತ್ನಮ್ ಸಿಂಗ್ ಸಂಧು (ಜನವರಿ 2030) ಬಿಜೆಪಿಗೆ ಸೇರಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ (ನಿವೃತ್ತ) ರಂಜನ್ ಗೊಗೊಯ್ ಅವರ ಅಧಿಕಾರಾವಧಿ ಮುಗಿದಾಗ ಒಂದು ನಾಮನಿರ್ದೇಶಿತ ಸ್ಥಾನ ಖಾಲಿಯಾಗಲಿದೆ.

ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ (ಜುಲೈ 2028 ರವರೆಗೆ), ಮತ್ತು ಸುಧಾ ಮೂರ್ತಿ (ಮಾರ್ಚ್ 2030 ರವರೆಗೆ ಅವಧಿ) ಇತರ ನಾಮನಿರ್ದೇಶಿತ ಸದಸ್ಯರು.

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ಸಲಹೆಯಂತೆ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆ : ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ಎಂದ ನ್ಯಾ. ಉಜ್ಜಲ್ ಭುಯಾನ್

ಕೇಂದ್ರ ಸರ್ಕಾರದ ಕೋರಿಕೆಯ ಮೇರೆಗೆ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಪ್ರಸ್ತಾವನೆ ಮಾರ್ಪಡಿಸಿದ ಕೊಲಿಜಿಯಂನ ಇತ್ತೀಚಿನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಪ್ರಶ್ನಿಸಿದ್ದು, "ನ್ಯಾಯಾಧೀಶರ ವರ್ಗಾವಣೆ ಮತ್ತು ನೇಮಕಾತಿ...

ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

ಹಿಂದಿ ವಿರೋಧಿ ಆಂದೋಲನದ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಜ್ಯದ ಹುತಾತ್ಮರನ್ನು ಡಿಎಂಕೆ ಅಧ್ಯಕ್ಷ ಮತ್ತು ತನಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇಂದು ಶ್ಲಾಘಿಸಿದರು. ನಮ್ಮಲ್ಲಿ ಹಿಂದಿ ಭಾಷೆಗೆ ಶಾಶ್ವತವಾಗಿ...

ಒಡಿಶಾ : ಗಣರಾಜ್ಯೋತ್ಸವ ದಿನ ಮಾಂಸ, ಮೊಟ್ಟೆ, ಮೀನು ಮಾರಾಟ ನಿಷೇಧಿಸಿದ ಜಿಲ್ಲಾಡಳಿತ!

ಗಣರಾಜ್ಯೋತ್ಸವದಂದು ಜಿಲ್ಲೆಯಾದ್ಯಂತ ಮಾಂಸಾಹಾರಿ ವಸ್ತುಗಳ ಮಾರಾಟವನ್ನು ನಿಷೇಧಿಸಿ ಒಡಿಶಾದ ಕೊರಾಪುಟ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜನವರಿ 26, ಗಣರಾಜ್ಯೋತ್ಸವದಂದು ಮಾಂಸ, ಕೋಳಿ, ಮೊಟ್ಟೆ, ಮೀನು ಮತ್ತು ಇತರ ಮಾಂಸಾಹಾರಿ ವಸ್ತುಗಳ...

ಮೋದಿ ಸ್ವಾಗತಿಸುವ ಫ್ಲೆಕ್ಸ್ ಬೋರ್ಡ್‌; ದಂಡ ವಿಧಿಸಿದ ಬಿಜೆಪಿ ಆಡಳಿತದ ತಿರುವನಂತಪುರಂ ಮಹಾನಗರ ಪಾಲಿಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು...

ಲಂಚ ಪ್ರಕರಣ : ಅದಾನಿಗೆ ಸಮನ್ಸ್ ತಲುಪಿಸಲು ಎರಡು ಬಾರಿ ನಿರಾಕರಿಸಿದ ಕೇಂದ್ರ

ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರಿಗೆ ಕಾನೂನು ಸಮನ್ಸ್ ಕಳುಹಿಸಿತ್ತು. ಆದರೆ, ಭಾರತದ ಕಾನೂನು ಮತ್ತು ನ್ಯಾಯ ಸಚಿವಾಲಯ ಈ...

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. 'ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು...

ನ್ಯೂಸ್ ಲಾಂಡ್ರಿ ಸಂಪಾದಕಿ ಬಗ್ಗೆ ತಪ್ಪು ವರದಿ: ದೆಹಲಿ ಹೈಕೋರ್ಟ್ ಅಸಮಾಧಾನ

ನ್ಯೂಸ್ ಲಾಂಡ್ರಿ ವ್ಯವಸ್ಥಾಪಕ ಸಂಪಾದಕಿ ಮನೀಷಾ ಪಾಂಡೆ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ, ಕೋರ್ಟ್‌ನ ಮೌಖಿಕ ಅವಲೋಕನಗಳ ಕುರಿತು ಕೆಲ ಮಾಧ್ಯಮಗಳ ವರದಿ ಮಾಡಿದ ರೀತಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಅಸಮಾಧಾನ...

ಇಬ್ಬರು ಬಂಗಾಳಿ ವಲಸೆ ಕಾರ್ಮಿಕರ ಶವ ಪತ್ತೆ : ಒಬ್ಬರನ್ನು ಹಿಂದುತ್ವ ಗುಂಪು ಥಳಿಸಿ ಕೊಂದಿರುವ ಆರೋಪ

ಪ್ರತ್ಯೇಕ ರಾಜ್ಯಗಳಲ್ಲಿ ಇಬ್ಬರು ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರು ಶವವಾಗಿ ಪತ್ತೆಯಾಗಿದ್ದು, ದೇಶದಲ್ಲಿ ಬಂಗಾಳಿ ಮಾತನಾಡುವ ಕಾರ್ಮಿಕರ ವಿರುದ್ದ ಹೆಚ್ಚುತ್ತಿರುವ ಹಿಂಸಾಚಾರದ ಭಾಗವಾಗಿ ಇಬ್ಬರನ್ನೂ ಕೊಲ್ಲಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿವೆ. ಆಂಧ್ರ ಪ್ರದೇಶದ...

ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ. ಕಳೆದುಕೊಂಡ ವ್ಯಕ್ತಿ : ಹಣ ಮರುಪಾವತಿ, ವಂಚನೆ ತಡೆಗೆ ಮಾರ್ಗಸೂಚಿ ಕೋರಿ ಸುಪ್ರೀಂ ಮೊರೆ

ಸೈಬರ್ ವಂಚನೆಯಾದ ಡಿಜಿಟಲ್ ಅರೆಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ (22.92 ಕೋಟಿ) ಕಳೆದುಕೊಂಡ 82 ವರ್ಷದ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ, ಭಾರತೀಯ ರಿಸರ್ವ್...

ಒಡಿಶಾ| ಗುಂಪು ಹಲ್ಲೆಯ ನಂತರ ಪಾದ್ರಿ ಕುಟುಂಬ ವಾಸವಿದ್ದ ಬಾಡಿಗೆ ಮನೆ ಖಾಲಿ ಮಾಡುವಂತೆ ಒತ್ತಡ

ಈ ತಿಂಗಳ ಆರಂಭದಲ್ಲಿ ಗುಂಪೊಂದು ಹಲ್ಲೆ ನಡೆಸಿ ಸಾರ್ವಜನಿಕವಾಗಿ ಅವಮಾನಿಸಿತ್ತು ಎನ್ನಲಾದ ಒಡಿಶಾ ಪಾದ್ರಿ ಕುಟುಂಬ ಎಂಟು ವರ್ಷಗಳ ಕಾಲ ವಾಸಿಸುತ್ತಿದ್ದ ಮನೆಯಿಂದ ಖಾಲಿ ಮಾಡುವಂತೆ ಒತ್ತಾಯಿಸಲಾಗಿದೆ. ಇದರಿಂದಾಗಿ ಅವರ ಕುಟುಂಬ ಭಯಭೀತರಾಗಿ...