Homeಮುಖಪುಟಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

- Advertisement -
- Advertisement -

ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ಮತ್ತು ರಾಜಕೀಯ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇದರೊಂದಿಗೆ, ರಾಜ್ಯಸಭೆಯ ನಾಮನಿರ್ದೇಶಿತ ವರ್ಗದ ಎಲ್ಲಾ 12 ಸ್ಥಾನಗಳು ಭರ್ತಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನಾಲ್ಕು ಸ್ಥಾನಗಳು ಮತ್ತು ಹರಿಯಾಣದ ಒಂದು ಸ್ಥಾನ ಖಾಲಿಯಿದೆ. 240 ಸದಸ್ಯರ ಸದನದಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 135 ಸಂಸದರ ಬೆಂಬಲವನ್ನು ಹೊಂದಿದೆ, ಇದರಲ್ಲಿ ಸಾಮಾನ್ಯವಾಗಿ ಸರ್ಕಾರವನ್ನು ಬೆಂಬಲಿಸುವ ಎಲ್ಲಾ 12 ನಾಮನಿರ್ದೇಶಿತ ಸಂಸದರು ಮತ್ತು ಒಬ್ಬ ಸ್ವತಂತ್ರ ಸದಸ್ಯ ಸೇರಿದ್ದಾರೆ.

ರಾಜ್ಯಸಭೆಗೆ ಹೊಸದಾಗಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಬಗ್ಗೆ ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರಾತ್ರಿ ಅಧಿಸೂಚನೆ ಹೊರಡಿಸಿದೆ.

ವಿದೇಶಾಂಗ ವ್ಯವಹಾರಗಳಲ್ಲಿ ಪರಿಣತಿ ಹೊಂದಿದ್ದಕ್ಕಾಗಿ ಶ್ರಿಂಗ್ಲಾ ಅವರನ್ನು ರಾಜ್ಯಸಭೆಗೆ ಕರೆತರಲಾಗಿದೆ. ವಿದೇಶಾಂಗ ಕಾರ್ಯದರ್ಶಿಯಾಗುವ ಮೊದಲು ಅಮೆರಿಕದ ಮಾಜಿ ರಾಯಭಾರಿಯಾಗಿದ್ದ ಶ್ರಿಂಗ್ಲಾ, 2023ರಲ್ಲಿ ಭಾರತದ ಜಿ 20 ಅಧ್ಯಕ್ಷತೆಯ ಮುಖ್ಯ ಸಂಯೋಜಕರಾಗಿದ್ದರು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಇತ್ತೀಚಿನ ಜಾಗತಿಕ ಸಂಪರ್ಕದ ಭಾಗವಾಗಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಗೂ ಮುನ್ನ, ಶ್ರಿಂಗ್ಲಾ ಅವರು ರಾಜಕೀಯಕ್ಕೆ ಧುಮುಕುತ್ತಾರೆ ಮತ್ತು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳಿದ್ದವು. 2023ರ ಕೊನೆಯಲ್ಲಿ ಮತ್ತು 2024ರ ಆರಂಭದಲ್ಲಿ, ಅವರು ತಮ್ಮ ‘ಡಾರ್ಜಿಲಿಂಗ್ ವೆಲ್ಫೇರ್ ಸೊಸೈಟಿ’ ಮೂಲಕ ಆ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹೆಸರುವಾಸಿಯಾಗಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, 2016ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋಲನುಭವಿಸಿದ್ದರು.

ಗುಲ್ಶನ್ ಕುಮಾರ್ ಮತ್ತು ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣಗಳಲ್ಲಿ, 1993ರ ಮುಂಬೈ ಸರಣಿ ಸ್ಫೋಟಗಳು ಮತ್ತು 2003 ರ ಗೇಟ್‌ವೇ ಆಫ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.

ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ದೆಹಲಿಯ ಗಾರ್ಗಿ ಕಾಲೇಜಿನ ಮಾಜಿ ಅಸೋಸಿಯೇಟ್ ಪ್ರೊಫೆಸರ್. ಇವರು 2020ರಲ್ಲಿ ಪದ್ಮಶ್ರೀ ಪ್ರಶಸ್ತಿ ಭಾಜನರಾಗಿದ್ದಾರೆ. ಡಾ. ಜೈನ್ ಒಬ್ಬರು ಪ್ರಸಿದ್ಧ ರಾಜಕೀಯ ತಜ್ಞೆಯೂ ಹೌದು. ಟೈಮ್ಸ್ ಆಫ್ ಇಂಡಿಯಾದ ಮಾಜಿ ಸಂಪಾದಕ ಗಿರಿಲಾಲ್ ಜೈನ್ ಅವರ ಪುತ್ರಿಯಾಗಿರುವ ಜೈನ್ ಅವರನ್ನು, 2014ರಲ್ಲಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು.

ಶಿಕ್ಷಕರಾಗಿರುವ ಸದಾನಂದನ್ ಮಾಸ್ಟರ್, ಕೇರಳದಲ್ಲಿ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 1994ರಲ್ಲಿ ಸಿಪಿಐ(ಎಂ) ಕಾರ್ಯಕರ್ತರ ದಾಳಿಯಲ್ಲಿ ಇವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಘ ಪರಿವಾರದ ಹಿರಿಯ ನಾಯಕರು ನಡೆಸುತ್ತಿರುವ ಬಲಪಂಥೀಯ ಚಿಂತಕರ ಚಾವಡಿಯಾದ ‘ಭಾರತೀಯ ವಿಚಾರ ಕೇಂದ್ರ’ದೊಂದಿಗೆ ಸದಾನಂದನ್ ಮಾಸ್ಟರ್ ನಿಕಟ ಸಂಬಂಧ ಹೊಂದಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ವಾರ ಮೊದಲು ಆರು ವರ್ಷಗಳ ಅವಧಿಗೆ ಹೊಸ ಸದಸ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಸಂಸದರು ನಾಮನಿರ್ದೇಶನಗೊಂಡ ಆರು ತಿಂಗಳೊಳಗೆ ಒಂದು ಪಕ್ಷವನ್ನು ಸೇರಬಹುದು.

ಪ್ರಸ್ತುತ ಎಂಟು ನಾಮನಿರ್ದೇಶಿತ ಸಂಸದರಲ್ಲಿ, ಗುಲಾಮ್ ಅಲಿ (ಸೆಪ್ಟೆಂಬರ್ 2028 ರವರೆಗೆ ಅಧಿಕಾರಾವಧಿ) ಮತ್ತು ಸತ್ನಮ್ ಸಿಂಗ್ ಸಂಧು (ಜನವರಿ 2030) ಬಿಜೆಪಿಗೆ ಸೇರಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ (ನಿವೃತ್ತ) ರಂಜನ್ ಗೊಗೊಯ್ ಅವರ ಅಧಿಕಾರಾವಧಿ ಮುಗಿದಾಗ ಒಂದು ನಾಮನಿರ್ದೇಶಿತ ಸ್ಥಾನ ಖಾಲಿಯಾಗಲಿದೆ.

ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ (ಜುಲೈ 2028 ರವರೆಗೆ), ಮತ್ತು ಸುಧಾ ಮೂರ್ತಿ (ಮಾರ್ಚ್ 2030 ರವರೆಗೆ ಅವಧಿ) ಇತರ ನಾಮನಿರ್ದೇಶಿತ ಸದಸ್ಯರು.

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...