Homeಮುಖಪುಟಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

- Advertisement -
- Advertisement -

ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ಮತ್ತು ರಾಜಕೀಯ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇದರೊಂದಿಗೆ, ರಾಜ್ಯಸಭೆಯ ನಾಮನಿರ್ದೇಶಿತ ವರ್ಗದ ಎಲ್ಲಾ 12 ಸ್ಥಾನಗಳು ಭರ್ತಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನಾಲ್ಕು ಸ್ಥಾನಗಳು ಮತ್ತು ಹರಿಯಾಣದ ಒಂದು ಸ್ಥಾನ ಖಾಲಿಯಿದೆ. 240 ಸದಸ್ಯರ ಸದನದಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 135 ಸಂಸದರ ಬೆಂಬಲವನ್ನು ಹೊಂದಿದೆ, ಇದರಲ್ಲಿ ಸಾಮಾನ್ಯವಾಗಿ ಸರ್ಕಾರವನ್ನು ಬೆಂಬಲಿಸುವ ಎಲ್ಲಾ 12 ನಾಮನಿರ್ದೇಶಿತ ಸಂಸದರು ಮತ್ತು ಒಬ್ಬ ಸ್ವತಂತ್ರ ಸದಸ್ಯ ಸೇರಿದ್ದಾರೆ.

ರಾಜ್ಯಸಭೆಗೆ ಹೊಸದಾಗಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಬಗ್ಗೆ ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರಾತ್ರಿ ಅಧಿಸೂಚನೆ ಹೊರಡಿಸಿದೆ.

ವಿದೇಶಾಂಗ ವ್ಯವಹಾರಗಳಲ್ಲಿ ಪರಿಣತಿ ಹೊಂದಿದ್ದಕ್ಕಾಗಿ ಶ್ರಿಂಗ್ಲಾ ಅವರನ್ನು ರಾಜ್ಯಸಭೆಗೆ ಕರೆತರಲಾಗಿದೆ. ವಿದೇಶಾಂಗ ಕಾರ್ಯದರ್ಶಿಯಾಗುವ ಮೊದಲು ಅಮೆರಿಕದ ಮಾಜಿ ರಾಯಭಾರಿಯಾಗಿದ್ದ ಶ್ರಿಂಗ್ಲಾ, 2023ರಲ್ಲಿ ಭಾರತದ ಜಿ 20 ಅಧ್ಯಕ್ಷತೆಯ ಮುಖ್ಯ ಸಂಯೋಜಕರಾಗಿದ್ದರು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಇತ್ತೀಚಿನ ಜಾಗತಿಕ ಸಂಪರ್ಕದ ಭಾಗವಾಗಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಗೂ ಮುನ್ನ, ಶ್ರಿಂಗ್ಲಾ ಅವರು ರಾಜಕೀಯಕ್ಕೆ ಧುಮುಕುತ್ತಾರೆ ಮತ್ತು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳಿದ್ದವು. 2023ರ ಕೊನೆಯಲ್ಲಿ ಮತ್ತು 2024ರ ಆರಂಭದಲ್ಲಿ, ಅವರು ತಮ್ಮ ‘ಡಾರ್ಜಿಲಿಂಗ್ ವೆಲ್ಫೇರ್ ಸೊಸೈಟಿ’ ಮೂಲಕ ಆ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹೆಸರುವಾಸಿಯಾಗಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, 2016ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋಲನುಭವಿಸಿದ್ದರು.

ಗುಲ್ಶನ್ ಕುಮಾರ್ ಮತ್ತು ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣಗಳಲ್ಲಿ, 1993ರ ಮುಂಬೈ ಸರಣಿ ಸ್ಫೋಟಗಳು ಮತ್ತು 2003 ರ ಗೇಟ್‌ವೇ ಆಫ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.

ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ದೆಹಲಿಯ ಗಾರ್ಗಿ ಕಾಲೇಜಿನ ಮಾಜಿ ಅಸೋಸಿಯೇಟ್ ಪ್ರೊಫೆಸರ್. ಇವರು 2020ರಲ್ಲಿ ಪದ್ಮಶ್ರೀ ಪ್ರಶಸ್ತಿ ಭಾಜನರಾಗಿದ್ದಾರೆ. ಡಾ. ಜೈನ್ ಒಬ್ಬರು ಪ್ರಸಿದ್ಧ ರಾಜಕೀಯ ತಜ್ಞೆಯೂ ಹೌದು. ಟೈಮ್ಸ್ ಆಫ್ ಇಂಡಿಯಾದ ಮಾಜಿ ಸಂಪಾದಕ ಗಿರಿಲಾಲ್ ಜೈನ್ ಅವರ ಪುತ್ರಿಯಾಗಿರುವ ಜೈನ್ ಅವರನ್ನು, 2014ರಲ್ಲಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು.

ಶಿಕ್ಷಕರಾಗಿರುವ ಸದಾನಂದನ್ ಮಾಸ್ಟರ್, ಕೇರಳದಲ್ಲಿ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 1994ರಲ್ಲಿ ಸಿಪಿಐ(ಎಂ) ಕಾರ್ಯಕರ್ತರ ದಾಳಿಯಲ್ಲಿ ಇವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಘ ಪರಿವಾರದ ಹಿರಿಯ ನಾಯಕರು ನಡೆಸುತ್ತಿರುವ ಬಲಪಂಥೀಯ ಚಿಂತಕರ ಚಾವಡಿಯಾದ ‘ಭಾರತೀಯ ವಿಚಾರ ಕೇಂದ್ರ’ದೊಂದಿಗೆ ಸದಾನಂದನ್ ಮಾಸ್ಟರ್ ನಿಕಟ ಸಂಬಂಧ ಹೊಂದಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ವಾರ ಮೊದಲು ಆರು ವರ್ಷಗಳ ಅವಧಿಗೆ ಹೊಸ ಸದಸ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಸಂಸದರು ನಾಮನಿರ್ದೇಶನಗೊಂಡ ಆರು ತಿಂಗಳೊಳಗೆ ಒಂದು ಪಕ್ಷವನ್ನು ಸೇರಬಹುದು.

ಪ್ರಸ್ತುತ ಎಂಟು ನಾಮನಿರ್ದೇಶಿತ ಸಂಸದರಲ್ಲಿ, ಗುಲಾಮ್ ಅಲಿ (ಸೆಪ್ಟೆಂಬರ್ 2028 ರವರೆಗೆ ಅಧಿಕಾರಾವಧಿ) ಮತ್ತು ಸತ್ನಮ್ ಸಿಂಗ್ ಸಂಧು (ಜನವರಿ 2030) ಬಿಜೆಪಿಗೆ ಸೇರಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ (ನಿವೃತ್ತ) ರಂಜನ್ ಗೊಗೊಯ್ ಅವರ ಅಧಿಕಾರಾವಧಿ ಮುಗಿದಾಗ ಒಂದು ನಾಮನಿರ್ದೇಶಿತ ಸ್ಥಾನ ಖಾಲಿಯಾಗಲಿದೆ.

ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ (ಜುಲೈ 2028 ರವರೆಗೆ), ಮತ್ತು ಸುಧಾ ಮೂರ್ತಿ (ಮಾರ್ಚ್ 2030 ರವರೆಗೆ ಅವಧಿ) ಇತರ ನಾಮನಿರ್ದೇಶಿತ ಸದಸ್ಯರು.

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...